ಬ್ರೇಕಿಂಗ್ ನ್ಯೂಸ್
25-11-21 05:37 pm HK news Desk ಕರ್ನಾಟಕ
ಬಾಗಲಕೋಟೆ, ನ 25: ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಷಯವಾಗಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬಾಗಲಕೋಟೆಯ ಶಿರೂರು ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿರೂರು ಗ್ರಾಮದ ನಿವಾಸಿ ಯಲ್ಲಪ್ಪ ಗಾಳಿ(55) ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಂತೋಷ ಸಿ.ಬಿ. ನ.23 ರಂದು ಏಳು ಜನರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮಣ ಗಾಳಿ, ಬಸವರಾಜ ಕಡಿವಾಲ, ಮಲ್ಲಪ್ಪ ಕಡಿವಾಲ, ಲಕ್ಷ್ಮಣ ಕಡಿವಾಲ, ರಾಮಪ್ಪ ಕಡಿವಾಲ, ಸಕ್ರಪ್ಪ ಕಡಿವಾಲ, ಸಿದ್ದಪ್ಪ ಕಡಿವಾಲ ಜೀವಾವಧಿ ಶಿಕ್ಷೆಗೆ ಒಳಗಾದವರು.
ಏನಿದು ಘಟನೆ ;
ಶಿಕ್ಷೆ ನೀಡಲಾಗಿರುವ ಆರೋಪಿಗಳಲ್ಲೊಬ್ಬರಾದ ಸಕ್ರಪ್ಪ ಎಂಬುವರನ್ನು ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಇತರ ಆರು ಆರೋಪಿಗಳು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯಲ್ಲಪ್ಪ ಗಾಳಿ ಅವರ ಮನೆಗೆ 2012 ರ ಫೆಬ್ರವರಿ 1 ರ ರಾತ್ರಿ 1 ಗಂಟೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಈ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡ ಯಲ್ಲಪ್ಪ, ಆಸ್ಪತ್ರೆಗೆ ದಾಖಲಾಗಿದ್ದರು. ನಂತರ 2013 ರ ಡಿಸೆಂಬರ್ 4 ಕ್ಕೆ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಾವನ್ನಪ್ಪಿದ್ದರು ಎಂದು ಸರ್ಕಾರಿ ಅಭಿಯೋಜಕ ಸುನೀಲ್ ಹಂಜಿ ತಿಳಿಸಿದ್ದಾರೆ.
Bagalkote court sentensed seven accused for killing man over school election issue. The seven has killed a man by burning him on fire.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm