ಬ್ರೇಕಿಂಗ್ ನ್ಯೂಸ್
25-11-21 05:37 pm HK news Desk ಕರ್ನಾಟಕ
ಬಾಗಲಕೋಟೆ, ನ 25: ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಷಯವಾಗಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬಾಗಲಕೋಟೆಯ ಶಿರೂರು ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿರೂರು ಗ್ರಾಮದ ನಿವಾಸಿ ಯಲ್ಲಪ್ಪ ಗಾಳಿ(55) ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಂತೋಷ ಸಿ.ಬಿ. ನ.23 ರಂದು ಏಳು ಜನರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮಣ ಗಾಳಿ, ಬಸವರಾಜ ಕಡಿವಾಲ, ಮಲ್ಲಪ್ಪ ಕಡಿವಾಲ, ಲಕ್ಷ್ಮಣ ಕಡಿವಾಲ, ರಾಮಪ್ಪ ಕಡಿವಾಲ, ಸಕ್ರಪ್ಪ ಕಡಿವಾಲ, ಸಿದ್ದಪ್ಪ ಕಡಿವಾಲ ಜೀವಾವಧಿ ಶಿಕ್ಷೆಗೆ ಒಳಗಾದವರು.
ಏನಿದು ಘಟನೆ ;
ಶಿಕ್ಷೆ ನೀಡಲಾಗಿರುವ ಆರೋಪಿಗಳಲ್ಲೊಬ್ಬರಾದ ಸಕ್ರಪ್ಪ ಎಂಬುವರನ್ನು ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಇತರ ಆರು ಆರೋಪಿಗಳು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯಲ್ಲಪ್ಪ ಗಾಳಿ ಅವರ ಮನೆಗೆ 2012 ರ ಫೆಬ್ರವರಿ 1 ರ ರಾತ್ರಿ 1 ಗಂಟೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಈ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡ ಯಲ್ಲಪ್ಪ, ಆಸ್ಪತ್ರೆಗೆ ದಾಖಲಾಗಿದ್ದರು. ನಂತರ 2013 ರ ಡಿಸೆಂಬರ್ 4 ಕ್ಕೆ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಾವನ್ನಪ್ಪಿದ್ದರು ಎಂದು ಸರ್ಕಾರಿ ಅಭಿಯೋಜಕ ಸುನೀಲ್ ಹಂಜಿ ತಿಳಿಸಿದ್ದಾರೆ.
Bagalkote court sentensed seven accused for killing man over school election issue. The seven has killed a man by burning him on fire.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am