ಬ್ರೇಕಿಂಗ್ ನ್ಯೂಸ್
25-11-21 05:37 pm HK news Desk ಕರ್ನಾಟಕ
ಬಾಗಲಕೋಟೆ, ನ 25: ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಷಯವಾಗಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬಾಗಲಕೋಟೆಯ ಶಿರೂರು ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿರೂರು ಗ್ರಾಮದ ನಿವಾಸಿ ಯಲ್ಲಪ್ಪ ಗಾಳಿ(55) ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಂತೋಷ ಸಿ.ಬಿ. ನ.23 ರಂದು ಏಳು ಜನರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮಣ ಗಾಳಿ, ಬಸವರಾಜ ಕಡಿವಾಲ, ಮಲ್ಲಪ್ಪ ಕಡಿವಾಲ, ಲಕ್ಷ್ಮಣ ಕಡಿವಾಲ, ರಾಮಪ್ಪ ಕಡಿವಾಲ, ಸಕ್ರಪ್ಪ ಕಡಿವಾಲ, ಸಿದ್ದಪ್ಪ ಕಡಿವಾಲ ಜೀವಾವಧಿ ಶಿಕ್ಷೆಗೆ ಒಳಗಾದವರು.
ಏನಿದು ಘಟನೆ ;
ಶಿಕ್ಷೆ ನೀಡಲಾಗಿರುವ ಆರೋಪಿಗಳಲ್ಲೊಬ್ಬರಾದ ಸಕ್ರಪ್ಪ ಎಂಬುವರನ್ನು ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಇತರ ಆರು ಆರೋಪಿಗಳು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯಲ್ಲಪ್ಪ ಗಾಳಿ ಅವರ ಮನೆಗೆ 2012 ರ ಫೆಬ್ರವರಿ 1 ರ ರಾತ್ರಿ 1 ಗಂಟೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಈ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡ ಯಲ್ಲಪ್ಪ, ಆಸ್ಪತ್ರೆಗೆ ದಾಖಲಾಗಿದ್ದರು. ನಂತರ 2013 ರ ಡಿಸೆಂಬರ್ 4 ಕ್ಕೆ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಾವನ್ನಪ್ಪಿದ್ದರು ಎಂದು ಸರ್ಕಾರಿ ಅಭಿಯೋಜಕ ಸುನೀಲ್ ಹಂಜಿ ತಿಳಿಸಿದ್ದಾರೆ.
Bagalkote court sentensed seven accused for killing man over school election issue. The seven has killed a man by burning him on fire.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm