ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm