ಬ್ರೇಕಿಂಗ್ ನ್ಯೂಸ್
30-11-21 07:19 pm HK Desk news ಕರ್ನಾಟಕ
ಬೆಂಗಳೂರು, ನ. 30: ಇಡೀ ಜಗತ್ತಿಗೆ ಕೊರೊನಾ ವೈರಸ್ ಮೂರನೇ ಅಲೆಯ ಆತಂಕ ಕಾಡುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಹೊಸ ತಳಿ ಓಮಿಕ್ರಾನ್ ಆತಂಕ ಕೂಡ ಶುರುವಾಗಿದೆ. ಈ ವರೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಪ್ರಕರಣ ಭಾರತದಲ್ಲಿ ಪತ್ತೆಯಾಗಿಲ್ಲ. ಆದರೂ ಕೋವಿಡ್ ರೂಪಾಂತರಿ ವೈರಸ್ ಆತಂಕ ಮಾತ್ರ ಕಡಿಮೆಯಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡಲಾಗುವುದು ಎಂಬ ಊಹಾಪೋಹಗಳು ಎದುರಾಗಿವೆ.
ರೂಪಾಂತರಿ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಮಾಡಲಾಗುತ್ತಿದೆಯಾ? ಎಂಬುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.

"ರಾಜ್ಯದಲ್ಲಿ ಲಾಕ್ಡೌನ್ ಜಾರಿ ಇಲ್ಲ. ಈ ಕುರಿತಂತೆ ಯಾವುದೇ ಊಹಾಪೋಹಗಳಿಗೆ ಜನ ಕಿವಿಗೊಡಬಾರದು. ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.
"ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ,' ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
No lockdown in Karnataka dont believe in wrong rumours stated CM Bommai during the questions asked me media today.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm