ಬ್ರೇಕಿಂಗ್ ನ್ಯೂಸ್
01-12-21 01:14 pm HK Desk news ಕರ್ನಾಟಕ
ಬೆಂಗಳೂರು, ಡಿ.1: ಹೈಕೋರ್ಟ್ ಕಲಾಪ ನಡೆಯುತ್ತಿದ್ದಾಗ ಕರಾವಳಿ ಮೂಲದ ವ್ಯಕ್ತಿಯೊಬ್ಬರು ಅರೆನಗ್ನ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ನ್ಯಾಯಾಧೀಶರು ಗರಂ ಆಗಿರುವ ಪ್ರಸಂಗ ನಡೆದಿದೆ. ನ.30ರಂದು ಬೆಳಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಬಗ್ಗೆ ವರ್ಚುವಲ್ ಮೂಲಕ ವಿಡಿಯೋ ಕಾನ್ಫರೆನ್ಸ್ ನಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಉಜಿರೆ ಮೂಲದ ವ್ಯಕ್ತಿ ಎಂಟ್ರಿ ಆಗಿ ಅರೆನಗ್ನ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ತಂಡವನ್ನು ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಧೀಶ ರಿತುರಾಜ್ ಅವಸ್ಥಿ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸುತ್ತಿತ್ತು. ಈ ವೇಳೆ, ಸಂತ್ರಸ್ತ ಯುವತಿಯ ಪರವಾಗಿ ಹಾಜರಾಗಿದ್ದ ಹಿರಿಯ ಮಹಿಳಾ ವಕೀಲೆ ಇಂದಿರಾ ಜೈಸಿಂಗ್, ವಾದ ಮಂಡನೆ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಗೆ ಲಾಗಿನ್ ಆಗಿದ್ದ ‘ಶ್ರೀಧರ ಭಟ್ ಉಜಿರೆ ಎಸ್ ಡಿಎಂ’ ಎಂಬ ಹೆಸರಿನ ವ್ಯಕ್ತಿ ಸ್ನಾನ ಮಾಡಿಕೊಂಡು ಬಂದು ಮೈಯನ್ನು ಒಜ್ಜುತ್ತಿರುವ ಸ್ಥಿತಿಯಲ್ಲಿ ಬರಿ ಮೈಯಲ್ಲಿ ಕಾಣಿಸಿಕೊಂಡಿದ್ದಾರೆ.
20 ನಿಮಿಷಗಳ ಕಾಲ ಈ ರೀತಿ ವ್ಯಕ್ತಿ ಕಾಣಿಸಿಕೊಂಡಿದ್ದು, ಇದರಿಂದ ಮಹಿಳಾ ವಕೀಲೆ ತೀವ್ರ ಮುಜುಗರ ಅನುಭವಿಸಿದ್ದಾರೆ. ಈ ಬಗ್ಗೆ ಮಹಿಳಾ ವಕೀಲೆ ನ್ಯಾಯಾಧೀಶರ ಗಮನಕ್ಕೆ ತಂದಿದ್ದು, ಈ ರೀತಿ ವ್ಯಕ್ತಿಯೊಬ್ಬ ಕಾಣಿಸಿಕೊಂಡು ಅಡ್ಡಿಪಡಿಸಿರುವುದರಿಂದ ವಾದ ಮಂಡನೆಗೆ ಇರಿಸುಮುರಿಸು ಉಂಟಾಗಿದೆ. ಮುಜುಗರಕ್ಕೀಡಾಗಿ ವಾದ ಮಂಡಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಕೂಡಲೇ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನಾವು ಇದರ ಬಗ್ಗೆ ಗಮನಿಸಿಲ್ಲ. ಯಾರು ವ್ಯಕ್ತಿ ಕಾಣಿಸಿಕೊಂಡಿದ್ದಾರೋ ಅದರ ಬಗ್ಗೆ ತನಿಖೆ ನಡೆಸಿ, ನೋಟೀಸ್ ನೀಡುವಂತೆ ಸೂಚನೆ ನೀಡಿದ್ದಾರೆ.
ಶ್ರೀಧರ ಭಟ್ ಉಜಿರೆ ಎಸ್ ಡಿಎಂ ಹೆಸರಿನಲ್ಲಿ ಎಂಟ್ರಿ ಆಗಿದ್ದ ವ್ಯಕ್ತಿ ಕರಾವಳಿಯ ದಕ್ಷಿಣ ಕನ್ನಡ ಮೂಲದವರೇ ಆಗಿರಬೇಕು ಎನ್ನುವ ಮಾತುಗಳು ಕೇಳಿಬಂದಿವೆ. ಈ ವ್ಯಕ್ತಿಯೂ ಹೈಕೋರ್ಟ್ ವಕೀಲನೇ, ತಪ್ಪಾಗಿ ಲಾಗಿನ್ ಆಗಿದ್ದನೇ ಅಥವಾ ಕಿಡಿಗೇಡಿ ಉದ್ದೇಶದಿಂದ ಈ ರೀತಿ ವರ್ತಿಸಿದ್ದಾನೆಯೇ ಎನ್ನುವ ಬಗ್ಗೆ ತನಿಖೆಯಲ್ಲಿ ತಿಳಿದುಬರಬೇಕು.
A division bench of the high court headed by chief justice Ritu Raj Awasthi on Tuesday directed issuance of notice to a man who allegedly joined videoconference case hearing in a semi-naked condition. The incident took place during the hearing of petitions in the sex-for-job case involving former minister Ramesh Jarkiholi. Senior advocate Indira Jaising, appearing for the complainant, brought the conduct of the man, identified as Sridhar Bhat, to the notice of the chief justice and urged him to take strong action against Bhat.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 06:21 pm
HK News Desk
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm