ಬ್ರೇಕಿಂಗ್ ನ್ಯೂಸ್
03-12-21 04:53 pm HK Desk news ಕರ್ನಾಟಕ
ಬೆಂಗಳೂರು, ಡಿ.3 : ‘ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮದೇ ಇಲಾಖೆಯ ಆರಕ್ಷಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಭೆ ನಡೆಸಿದ ವೇಳೆ ಗೃಹ ಸಚಿವರು ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಜತೆ ದೂರವಾಣಿ ಮೂಲಕ ಮಾತನಾಡುತ್ತಿದ್ದಾಗ ಈ ರೀತಿ ಬೈದಿದ್ದು ವಿಡಿಯೊದಲ್ಲಿ ದಾಖಲಾಗಿದೆ.
ಇಡೀ ಚಿಕ್ಕಮಗಳೂರು ಜಿಲ್ಲೆ ನಿಮ್ಮದು. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತಿದ್ದೇವೆ. ಯಾರಿಗೂ ಕಡಿಮೆ ಮಾಡಿಲ್ಲ. ಆದ್ರೆ ಇವರಿಗೆಲ್ಲ ಸಂಬಳದಲ್ಲಿ ಬದುಕಬೇಕೆಂದಿಲ್ಲ. ಇಂಥವರೆಲ್ಲ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದಿದ್ದರೆ ಸಮವಸ್ತ್ರ ಬಿಚ್ಚಿಟ್ಟು ಎಲ್ಲಾದರೂ ಹೋಗಿ ಸಾಯಲಿ ಅಥವಾ ಮಣ್ಣು ಹೊರಲಿ. ಇವರನ್ನೆಲ್ಲ ನಂಬಿಕೊಂಡು ಜನ ಬದುಕುವುದು ಹೇಗೆ? ಇಲ್ಲಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಬಿಚ್ಚಿ ತೆಗೆದುಕೊಂಡು ಹೋಗುತ್ತಾರೆ. ಎಲ್ಲ ಪೊಲೀಸರು ಹಾಳಾಗಿ ಹೋಗಿದ್ದಾರೆ’ ಎಂದು ಸಚಿವರು ಹೇಳುತ್ತಿದ್ದಾರೆ.
ವಿಡಿಯೋ ವೈರಲ್ ಆದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ‘ಎಲ್ಲ ಪೊಲೀಸರನ್ನು ಉದ್ದೇಶಿಸಿ ಆ ರೀತಿಯ ಹೇಳಿಕೆ ನೀಡಿಲ್ಲ. ಅಕ್ರಮ ಗೋಸಾಗಾಟ ಮಾಡುವವರೊಂದಿಗೆ ಶಾಮೀಲಾದವರನ್ನು ಮಾತ್ರ ಉಲ್ಲೇಖಿಸಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.
‘ಗೃಹಸಚಿವನಾಗಿ ನಾನು ಪೊಲೀಸರನ್ನು ಗೌರವಿಸುತ್ತೇನೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಮೊನ್ನೆಯಷ್ಟೇ ನನ್ನ ಕ್ಷೇತ್ರದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಯತ್ನಿಸಿದವರ ಮೇಲೆ ಹಲ್ಲೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಕೆಲ ಪೊಲೀಸರನ್ನು ಉಲ್ಲೇಖಿಸಿ ಬೈದಿದ್ದೆ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
Karnataka Home Minister Slams Police officers says they are like dogs eating corrupted money. After a meeting in Chikmagalur Home Minister talking to a higher officer on phone call went viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am