ಬ್ರೇಕಿಂಗ್ ನ್ಯೂಸ್
03-12-21 04:53 pm HK Desk news ಕರ್ನಾಟಕ
ಬೆಂಗಳೂರು, ಡಿ.3 : ‘ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮದೇ ಇಲಾಖೆಯ ಆರಕ್ಷಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಭೆ ನಡೆಸಿದ ವೇಳೆ ಗೃಹ ಸಚಿವರು ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಜತೆ ದೂರವಾಣಿ ಮೂಲಕ ಮಾತನಾಡುತ್ತಿದ್ದಾಗ ಈ ರೀತಿ ಬೈದಿದ್ದು ವಿಡಿಯೊದಲ್ಲಿ ದಾಖಲಾಗಿದೆ.
ಇಡೀ ಚಿಕ್ಕಮಗಳೂರು ಜಿಲ್ಲೆ ನಿಮ್ಮದು. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತಿದ್ದೇವೆ. ಯಾರಿಗೂ ಕಡಿಮೆ ಮಾಡಿಲ್ಲ. ಆದ್ರೆ ಇವರಿಗೆಲ್ಲ ಸಂಬಳದಲ್ಲಿ ಬದುಕಬೇಕೆಂದಿಲ್ಲ. ಇಂಥವರೆಲ್ಲ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದಿದ್ದರೆ ಸಮವಸ್ತ್ರ ಬಿಚ್ಚಿಟ್ಟು ಎಲ್ಲಾದರೂ ಹೋಗಿ ಸಾಯಲಿ ಅಥವಾ ಮಣ್ಣು ಹೊರಲಿ. ಇವರನ್ನೆಲ್ಲ ನಂಬಿಕೊಂಡು ಜನ ಬದುಕುವುದು ಹೇಗೆ? ಇಲ್ಲಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಬಿಚ್ಚಿ ತೆಗೆದುಕೊಂಡು ಹೋಗುತ್ತಾರೆ. ಎಲ್ಲ ಪೊಲೀಸರು ಹಾಳಾಗಿ ಹೋಗಿದ್ದಾರೆ’ ಎಂದು ಸಚಿವರು ಹೇಳುತ್ತಿದ್ದಾರೆ.
ವಿಡಿಯೋ ವೈರಲ್ ಆದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ‘ಎಲ್ಲ ಪೊಲೀಸರನ್ನು ಉದ್ದೇಶಿಸಿ ಆ ರೀತಿಯ ಹೇಳಿಕೆ ನೀಡಿಲ್ಲ. ಅಕ್ರಮ ಗೋಸಾಗಾಟ ಮಾಡುವವರೊಂದಿಗೆ ಶಾಮೀಲಾದವರನ್ನು ಮಾತ್ರ ಉಲ್ಲೇಖಿಸಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.
‘ಗೃಹಸಚಿವನಾಗಿ ನಾನು ಪೊಲೀಸರನ್ನು ಗೌರವಿಸುತ್ತೇನೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಮೊನ್ನೆಯಷ್ಟೇ ನನ್ನ ಕ್ಷೇತ್ರದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಯತ್ನಿಸಿದವರ ಮೇಲೆ ಹಲ್ಲೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಕೆಲ ಪೊಲೀಸರನ್ನು ಉಲ್ಲೇಖಿಸಿ ಬೈದಿದ್ದೆ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
Karnataka Home Minister Slams Police officers says they are like dogs eating corrupted money. After a meeting in Chikmagalur Home Minister talking to a higher officer on phone call went viral.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm