ಬ್ರೇಕಿಂಗ್ ನ್ಯೂಸ್
03-12-21 06:31 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.3: ಪ್ರಧಾನಿ ಮೋದಿಯನ್ನು ರಾಕ್ಷಸನಿಗೆ ಹೋಲಿಸಿ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಚಿಂತಾಮಣಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ರಮೇಶ್ ಕುಮಾರ್ ಉದ್ರೇಕದ ಭಾಷಣ ಮಾಡಿದ್ದಾರೆ. ತೆಲುಗಿನಲ್ಲಿ ಭಾಷೆಯಲ್ಲಿ ಆವೇಶದಿಂದ ಮಾತನಾಡಿದ ರಮೇಶ್ ಕುಮಾರ್, ಈ ದೇಶವನ್ನು ಒಬ್ಬ ರಾಕ್ಷಸನ ಕೈಗೆ ಕೊಟ್ಟಿದ್ದೇವೆ. ಮೋದಿಯ ಕೈಗೆ ಸಿಕ್ಕಿ ಭಾರತ ದೇಶ ನಲುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ನೋಟ್ ಬ್ಯಾನ್ ಮಾಡಿ ಕೂಲಿ ಕಾರ್ಮಿಕರು, ಫುಟ್ ಪಾತ್ ಮೇಲೆ ಇರುವರು ಚಿಲ್ಲರೆ ಹಣ ಸಿಗದೆ ಸತ್ತುಹೋದರು. ಹಲವಾರು ಜನ ಬೀದಿಗೆ ಬಂದರು. ಜನರು ಹಸಿವಿನಿಂದ ಸಾಯುವ ಸ್ಥಿತಿಗೆ ಬಂದಿತ್ತು.
ಈ ಬಗ್ಗೆ ನಾವು ಪ್ರಶ್ನೆ ಮಾಡಿದರೆ ಟಿವಿಗಳ ಮುಂದೆ ಮೇಕಪ್ ಹಾಕಿಕೊಂಡು ಬಂದುಬಿಡ್ತಾರೆ. ಭಾರತ್ ಮಾತಾಕೀ ಅಂತ ಘೋಷಣೆ ಕೂಗಿ ಮರುಳು ಮಾಡ್ತಾರೆ. ಭಾರತವನ್ನು ಏನು ಇವರಿಗೆ ಗುತ್ತಿಗೆ ಕೊಟ್ಟಿದ್ದೇವಾ ಎಂದು ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶದ ಎಲೆಕ್ಷನ್ ನಲ್ಲಿ ಗೆದ್ದು ಪ್ರಧಾನಿಯಾಗುವುದಕ್ಕೆ ಆಸ್ಪದ ಮಾಡಿಕೊಟ್ಟಿದ್ದು ಕಾಂಗ್ರೆಸ್. ಈ ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯ, ಜನರಿಗೆ ನೆಮ್ಮದಿಯ ಬದುಕು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವರು ಕಾಂಗ್ರೆಸ್ ಏನೂ ಮಾಡೇ ಇಲ್ಲ ಎನ್ನುತ್ತಿದ್ದಾರೆ. ನನಗೆ ಎಷ್ಟು ಆಯಸ್ಸು ಇದೆಯೋ ಗೊತ್ತಿಲ್ಲ. ಆದರೆ ಇಲ್ಲಿಂದ ಕಣ್ಣು ಮುಚ್ಚುವ ಒಳಗೆ ಬಿಜೆಪಿ ಪೂರ್ತಿ ಸರ್ವನಾಶ ಆಗಬೇಕು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಕುಮಾರ್ ಶಾಪ ಹಾಕಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ಕಾರಣ ಸ್ಥಳೀಯರಿಗೆ ಅರ್ಥ ಆಗುವಂತೆ ರಮೇಶ್ ಕುಮಾರ್ ಕನ್ನಡ ಬಿಟ್ಟು ತೆಲುಗಿನಲ್ಲಿಯೇ ಭಾಷಣ ಮಾಡಿದ್ದಾರೆ.
We have given our nation to India to Demon Modi slams Congress leader Ramesh Kumar. He spoke during a election campaign at Chintamani.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm