ಬ್ರೇಕಿಂಗ್ ನ್ಯೂಸ್
03-12-21 06:31 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.3: ಪ್ರಧಾನಿ ಮೋದಿಯನ್ನು ರಾಕ್ಷಸನಿಗೆ ಹೋಲಿಸಿ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಚಿಂತಾಮಣಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ರಮೇಶ್ ಕುಮಾರ್ ಉದ್ರೇಕದ ಭಾಷಣ ಮಾಡಿದ್ದಾರೆ. ತೆಲುಗಿನಲ್ಲಿ ಭಾಷೆಯಲ್ಲಿ ಆವೇಶದಿಂದ ಮಾತನಾಡಿದ ರಮೇಶ್ ಕುಮಾರ್, ಈ ದೇಶವನ್ನು ಒಬ್ಬ ರಾಕ್ಷಸನ ಕೈಗೆ ಕೊಟ್ಟಿದ್ದೇವೆ. ಮೋದಿಯ ಕೈಗೆ ಸಿಕ್ಕಿ ಭಾರತ ದೇಶ ನಲುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ನೋಟ್ ಬ್ಯಾನ್ ಮಾಡಿ ಕೂಲಿ ಕಾರ್ಮಿಕರು, ಫುಟ್ ಪಾತ್ ಮೇಲೆ ಇರುವರು ಚಿಲ್ಲರೆ ಹಣ ಸಿಗದೆ ಸತ್ತುಹೋದರು. ಹಲವಾರು ಜನ ಬೀದಿಗೆ ಬಂದರು. ಜನರು ಹಸಿವಿನಿಂದ ಸಾಯುವ ಸ್ಥಿತಿಗೆ ಬಂದಿತ್ತು.
ಈ ಬಗ್ಗೆ ನಾವು ಪ್ರಶ್ನೆ ಮಾಡಿದರೆ ಟಿವಿಗಳ ಮುಂದೆ ಮೇಕಪ್ ಹಾಕಿಕೊಂಡು ಬಂದುಬಿಡ್ತಾರೆ. ಭಾರತ್ ಮಾತಾಕೀ ಅಂತ ಘೋಷಣೆ ಕೂಗಿ ಮರುಳು ಮಾಡ್ತಾರೆ. ಭಾರತವನ್ನು ಏನು ಇವರಿಗೆ ಗುತ್ತಿಗೆ ಕೊಟ್ಟಿದ್ದೇವಾ ಎಂದು ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶದ ಎಲೆಕ್ಷನ್ ನಲ್ಲಿ ಗೆದ್ದು ಪ್ರಧಾನಿಯಾಗುವುದಕ್ಕೆ ಆಸ್ಪದ ಮಾಡಿಕೊಟ್ಟಿದ್ದು ಕಾಂಗ್ರೆಸ್. ಈ ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯ, ಜನರಿಗೆ ನೆಮ್ಮದಿಯ ಬದುಕು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವರು ಕಾಂಗ್ರೆಸ್ ಏನೂ ಮಾಡೇ ಇಲ್ಲ ಎನ್ನುತ್ತಿದ್ದಾರೆ. ನನಗೆ ಎಷ್ಟು ಆಯಸ್ಸು ಇದೆಯೋ ಗೊತ್ತಿಲ್ಲ. ಆದರೆ ಇಲ್ಲಿಂದ ಕಣ್ಣು ಮುಚ್ಚುವ ಒಳಗೆ ಬಿಜೆಪಿ ಪೂರ್ತಿ ಸರ್ವನಾಶ ಆಗಬೇಕು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಕುಮಾರ್ ಶಾಪ ಹಾಕಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ಕಾರಣ ಸ್ಥಳೀಯರಿಗೆ ಅರ್ಥ ಆಗುವಂತೆ ರಮೇಶ್ ಕುಮಾರ್ ಕನ್ನಡ ಬಿಟ್ಟು ತೆಲುಗಿನಲ್ಲಿಯೇ ಭಾಷಣ ಮಾಡಿದ್ದಾರೆ.
We have given our nation to India to Demon Modi slams Congress leader Ramesh Kumar. He spoke during a election campaign at Chintamani.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am