ಬ್ರೇಕಿಂಗ್ ನ್ಯೂಸ್
03-12-21 07:22 pm HK Desk news ಕರ್ನಾಟಕ
ಚಿತ್ರದುರ್ಗ, ಡಿ.3: ಕಳೆದ ವಿಧಾನಸಭೆ ಅಧಿವೇಶನದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ತನ್ನ ಕ್ಷೇತ್ರದಲ್ಲಿ ಅಮಾಯಕ ಜನರನ್ನು ಕ್ರಿಸ್ತಿಯನ್ನರಾಗಿ ಬಲವಂತದ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ, ಮತಾಂತರ ನಿಷೇಧಕ್ಕೆ ಕಾನೂನು ತರಬೇಕೆಂದು ಆಗ್ರಹಿಸಿದ್ದರು. ತನ್ನ ತಾಯಿಯೂ ಈ ಮತಾಂತರ ಪೀಡೆಗೆ ಒಳಗಾಗಿದ್ದಾರೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದರು.
ಅದರಂತೆ, ಹೊಸದುರ್ಗ ತಾಲೂಕಿನಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಮತಾಂತರ ಪ್ರಕ್ರಿಯೆ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿತ್ತು. ತಾಲೂಕಿನ ಎರಡು ಗ್ರಾಮಗಳಲ್ಲಿ 45 ಕುಟುಂಬಗಳ ಸದಸ್ಯರು ಸ್ವಯಂಪ್ರೇರಿತರಾಗಿ ಮತಾಂತರ ಆಗಿದ್ದಾಗಿ ಹೇಳಿಕೆ ನೀಡಿದ್ದಾರೆ. ಯಾವುದೇ ಒತ್ತಡ, ಬಲವಂತಕ್ಕೆ ನಾವು ಮತಾಂತರ ಆಗಿಲ್ಲ. ಸ್ವಯಂ ಆಗಿಯೇ ಕ್ರಿಸ್ತಿಯನ್ ಆಗಿ ಮತಾಂತರ ಮಾಡಿಕೊಂಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.
ಬಲವಂತದ ಮತಾಂತರ ಪ್ರಕ್ರಿಯೆ ಬಗ್ಗೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮೀಕ್ಷೆ ಕೈಗೊಂಡಿದ್ದರು. ಸಮೀಕ್ಷೆಯಲ್ಲಿ ಕೆಲವು ಕಡೆ ಗ್ರಾಮಸ್ಥರು ಬಲವಂತದ ಮತಾಂತರ ನಡೆಸುತ್ತಿರುವ ಬಗ್ಗೆ ಆರೋಪ ಮಾಡಿದ್ದಾರೆ. ಮತಾಂತರ ಆದವರು, ಕೆಲವು ಆಮಿಷಗಳಿಗೆ ಬಲಿಯಾಗಿ ಸ್ವಧರ್ಮ ತೊರೆದಿದ್ದಾರೆ ಎನ್ನುವ ಮಾತು ಹೇಳಿದ್ದಾರೆ. ಆದರೆ, ಮತಾಂತರ ಆದವರು ಈ ಮಾತನ್ನು ಅಲ್ಲಗಳೆದಿದ್ದಾರೆ. ನಾವು ಯಾವುದೇ ಒತ್ತಡಕ್ಕೆ ಕಟ್ಟುಬಿದ್ದಿಲ್ಲ. ನಮಗೆ ಇಲ್ಲಿ ಮಾನಸಿಕ ಶಾಂತಿ ಸಿಕ್ಕಿದೆ, ಹೀಗಾಗಿ ಮತಾಂತರ ಆಗಿದ್ದೇವೆ ಎಂದಿದ್ದಾರೆ.
ಗೂಳಿಹಟ್ಟಿ ಶೇಖರ್ ಅಧಿವೇಶನದಲ್ಲಿ ತನ್ನ ತಾಯಿಯೇ ಮತಾಂತರ ಆಗಿದ್ದಾರೆಂದು ಹೇಳಿಕೆ ನೀಡಿದ್ದು ದೊಡ್ಡ ಸಂಚಲನ ಉಂಟುಮಾಡಿತ್ತು. ಆನಂತರ, ಶೇಖರ್ ತಾಯಿ ಮತ್ತು ಇತರ 9 ಮಂದಿ ಸ್ವಧರ್ಮಕ್ಕೆ ಮರಳಿದ್ದಾಗಿ ಹೇಳಲಾಗಿತ್ತು. ರಾಜ್ಯ ಸರಕಾರ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಹೇಳಿಕೆ ನೀಡಿದೆ.
Contrary to what Hosadurga BJP MLA Gulihatti Shekhar had claimed, an official survey conducted by Hosadurga tahsildar found that 46 families in two villages in Hosadurga taluk of Chitradurga district accepted Christianity on their own, and were not forced. The families told the official team that nobody forced them to accept Christianity.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am