ಬ್ರೇಕಿಂಗ್ ನ್ಯೂಸ್
03-12-21 07:22 pm HK Desk news ಕರ್ನಾಟಕ
ಚಿತ್ರದುರ್ಗ, ಡಿ.3: ಕಳೆದ ವಿಧಾನಸಭೆ ಅಧಿವೇಶನದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ತನ್ನ ಕ್ಷೇತ್ರದಲ್ಲಿ ಅಮಾಯಕ ಜನರನ್ನು ಕ್ರಿಸ್ತಿಯನ್ನರಾಗಿ ಬಲವಂತದ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ, ಮತಾಂತರ ನಿಷೇಧಕ್ಕೆ ಕಾನೂನು ತರಬೇಕೆಂದು ಆಗ್ರಹಿಸಿದ್ದರು. ತನ್ನ ತಾಯಿಯೂ ಈ ಮತಾಂತರ ಪೀಡೆಗೆ ಒಳಗಾಗಿದ್ದಾರೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದರು.
ಅದರಂತೆ, ಹೊಸದುರ್ಗ ತಾಲೂಕಿನಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಮತಾಂತರ ಪ್ರಕ್ರಿಯೆ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿತ್ತು. ತಾಲೂಕಿನ ಎರಡು ಗ್ರಾಮಗಳಲ್ಲಿ 45 ಕುಟುಂಬಗಳ ಸದಸ್ಯರು ಸ್ವಯಂಪ್ರೇರಿತರಾಗಿ ಮತಾಂತರ ಆಗಿದ್ದಾಗಿ ಹೇಳಿಕೆ ನೀಡಿದ್ದಾರೆ. ಯಾವುದೇ ಒತ್ತಡ, ಬಲವಂತಕ್ಕೆ ನಾವು ಮತಾಂತರ ಆಗಿಲ್ಲ. ಸ್ವಯಂ ಆಗಿಯೇ ಕ್ರಿಸ್ತಿಯನ್ ಆಗಿ ಮತಾಂತರ ಮಾಡಿಕೊಂಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.
ಬಲವಂತದ ಮತಾಂತರ ಪ್ರಕ್ರಿಯೆ ಬಗ್ಗೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮೀಕ್ಷೆ ಕೈಗೊಂಡಿದ್ದರು. ಸಮೀಕ್ಷೆಯಲ್ಲಿ ಕೆಲವು ಕಡೆ ಗ್ರಾಮಸ್ಥರು ಬಲವಂತದ ಮತಾಂತರ ನಡೆಸುತ್ತಿರುವ ಬಗ್ಗೆ ಆರೋಪ ಮಾಡಿದ್ದಾರೆ. ಮತಾಂತರ ಆದವರು, ಕೆಲವು ಆಮಿಷಗಳಿಗೆ ಬಲಿಯಾಗಿ ಸ್ವಧರ್ಮ ತೊರೆದಿದ್ದಾರೆ ಎನ್ನುವ ಮಾತು ಹೇಳಿದ್ದಾರೆ. ಆದರೆ, ಮತಾಂತರ ಆದವರು ಈ ಮಾತನ್ನು ಅಲ್ಲಗಳೆದಿದ್ದಾರೆ. ನಾವು ಯಾವುದೇ ಒತ್ತಡಕ್ಕೆ ಕಟ್ಟುಬಿದ್ದಿಲ್ಲ. ನಮಗೆ ಇಲ್ಲಿ ಮಾನಸಿಕ ಶಾಂತಿ ಸಿಕ್ಕಿದೆ, ಹೀಗಾಗಿ ಮತಾಂತರ ಆಗಿದ್ದೇವೆ ಎಂದಿದ್ದಾರೆ.
ಗೂಳಿಹಟ್ಟಿ ಶೇಖರ್ ಅಧಿವೇಶನದಲ್ಲಿ ತನ್ನ ತಾಯಿಯೇ ಮತಾಂತರ ಆಗಿದ್ದಾರೆಂದು ಹೇಳಿಕೆ ನೀಡಿದ್ದು ದೊಡ್ಡ ಸಂಚಲನ ಉಂಟುಮಾಡಿತ್ತು. ಆನಂತರ, ಶೇಖರ್ ತಾಯಿ ಮತ್ತು ಇತರ 9 ಮಂದಿ ಸ್ವಧರ್ಮಕ್ಕೆ ಮರಳಿದ್ದಾಗಿ ಹೇಳಲಾಗಿತ್ತು. ರಾಜ್ಯ ಸರಕಾರ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಹೇಳಿಕೆ ನೀಡಿದೆ.
Contrary to what Hosadurga BJP MLA Gulihatti Shekhar had claimed, an official survey conducted by Hosadurga tahsildar found that 46 families in two villages in Hosadurga taluk of Chitradurga district accepted Christianity on their own, and were not forced. The families told the official team that nobody forced them to accept Christianity.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm