ಬ್ರೇಕಿಂಗ್ ನ್ಯೂಸ್
10-12-21 10:18 pm HK Desk news ಕರ್ನಾಟಕ
ಬೆಂಗಳೂರು, ಡಿ.10 : ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರಂತ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ವಿಕೃತವಾಗಿ ಪೋಸ್ಟ್ ಮಾಡಿ, ಸಂಭ್ರಮಿಸಿದ್ದ ಬಗ್ಗೆ ಎಫ್ಐಆರ್ ದಾಖಲಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಈ ಬಗ್ಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
ರಕ್ಷಣಾ ಪಡೆಗಳ ಮುಖ್ಯಸ್ಥರ ಬಗ್ಗೆ ಅಗೌರವದಿಂದ ಸಂದೇಶ ಹರಡುವುದನ್ನು ಸಹಿಸುವುದಿಲ್ಲ. ಈ ರೀತಿಯ ವರ್ತನೆಯನ್ನು ಖಂಡಿಸುತ್ತಿದ್ದು, ಅಂಥವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಗೆ ಹೇಳಿಕೆ ನೀಡಿರುವ ಬೊಮ್ಮಾಯಿ, ಕೆಲವು ಸ್ಥಾಪಿತ ಹಿತಾಸಕ್ತಿಯ ಮೈಂಡ್ ಸೆಟ್ ಉಳ್ಳವರು ರಕ್ಷಣಾ ಪಡೆಗಳ ಮುಖ್ಯಸ್ಥರ ಸಾವಿನ ಬಗ್ಗೆ ಪ್ರಚೋದನಕಾರಿ ಮತ್ತು ಸಂಭ್ರಮಿಸುವ ರೀತಿ ಸಂದೇಶ ಹರಡಿದ್ದಾರೆ. ಇಂತಹ ಸಮಾಜ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಇದಕ್ಕೂ ಮುನ್ನ ಹೆಲಿಕಾಪ್ಟರ್ ದುರಂತದ ಬಗ್ಗೆ ಯಾರು ಕೂಡ ಊಹಾಪೋಹ ಹರಡಬೇಡಿ. ಮೂರು ಸೇನಾ ತಂಡಗಳಿಂದ ಘಟನೆ ಬಗ್ಗೆ ತನಿಖೆ ನಡೆಸಲು ತಂಡ ರಚಿಸಲಾಗಿದೆ ಎಂದು ಭಾರತೀಯ ವಾಯುಪಡೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಘಟನೆ ಬಗ್ಗೆ ವಾಯುಪಡೆ ಹಿರಿಯ ಅಧಿಕಾರಿ ಏರ್ ಮಾರ್ಶಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ತಿಳಿಸಿದ್ದರು.
ಕರಾವಳಿ ಸೇರಿದಂತೆ ದೇಶದ ಹಲವೆಡೆ ರಕ್ಷಣಾ ಪಡೆಗಳ ಮುಖ್ಯಸ್ಥರ ಸಾವಿನ ಬಗ್ಗೆ ಅವಹೇಳನಕಾರಿ ಬರೆದು ಕೆಲವರು ಪೋಸ್ಟ್ ಮಾಡಿದ್ದರು. ಈ ಬಗ್ಗೆ ಭಾರೀ ಆಕ್ರೋಶ ಕೂಡ ಕೇಳಿಬಂದಿದೆ. ಈಗಾಗ್ಲೇ ಗುಜರಾತ್ ಮತ್ತು ಉತ್ತರ ಪ್ರದೇಶ ಸರಕಾರಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಆದೇಶ ನೀಡಿದೆ.
Offensive Tweets and Social Media posts about the tragic chopper crash in which we lost our #CDSGeneralBipinRawat will not be tolerated. I strongly condemn all such messages and have instructed our Police Officials to take strict disciplinary legal action against the offenders.
— Basavaraj S Bommai (@BSBommai) December 10, 2021
Karnataka Chief Minister Basavaraj Bommai said on Friday that “offensive tweets and social media posts” about the helicopter crash in which Chief of Defence Staff Bipin Rawat died will not be tolerated. Bipin Rawat, his wife Madhulika Rawat and 11 others died on Wednesday in the helicopter crash in the Katteri-Nanchappanchathram area of Tamil Nadu’s Coonoor district.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm