ಬ್ರೇಕಿಂಗ್ ನ್ಯೂಸ್
11-12-21 02:33 pm HK Desk news ಕರ್ನಾಟಕ
ದಾವಣಗೆರೆ, ಡಿ.11 : ಶಾಲೆಯಲ್ಲಿ ಹಿಂದಿ ಶಿಕ್ಷಕರು ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿಗಳು ಕುಚೇಷ್ಟೆ ಮಾಡಿ, ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ ವಿದ್ಯಾರ್ಥಿಗಳು ಈ ರೀತಿ ಮಾಡಿದ್ದು ಆಕ್ರೋಶ ಕೇಳಿಬಂದಿದೆ.
ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್ಗೆ ಶಾಲೆಯ ಐದಾರು ವಿದ್ಯಾರ್ಥಿಗಳು ಕುಚೇಷ್ಟೆ ಮೂಲಕ ಹಲ್ಲೆ ಮಾಡಿದ್ದಾರೆ. ಶಿಕ್ಷಕರ ತಲೆಯ ಮೇಲೆ ಬಕೆಟ್ ಇಟ್ಟು ವಿಕೃತಿ ಪ್ರದರ್ಶಿಸಿ ಸಂತೋಷಪಟ್ಟಿದ್ದಾರೆ. ಇದನ್ನು ವಿಡಿಯೋ ಮಾಡಿ, ಮನಸ್ಸಿಗೆ ಬಂದಂತೆ ಅವಹೇಳನ ಮಾಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಮಾಡಿದ್ದ ವಿಡಿಯೋ ಈಗ ವೈರಲ್ ಆಗಿದ್ದು, ವಿದ್ಯಾರ್ಥಿಗಳ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರಕಾಶ್ ಬೋಗಾರ್ ಅತ್ಯಂತ ಸರಳ, ಸೌಮ್ಯ ಸ್ವಭಾವದ ಶಿಕ್ಷಕರಾಗಿದ್ದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನಲ್ಲೂರಿಗೆ ಭೇಟಿ ನೀಡಿದ್ದಾರೆ. ಶಾಲೆಯ ಶಿಕ್ಷಕರು, ಪ್ರಾಂಶುಪಾಲರು, ಗ್ರಾಮಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಮಹಾಂತೇಶ್. ಆರ್. ಬೀಳಗಿ, ವಿದ್ಯಾರ್ಥಿಗಳು ಶಿಕ್ಷಕರಿಗೆ ಕುಚೇಷ್ಟೆ, ಅವಮಾನ ಮಾಡಿರುವ ವಿಡಿಯೋ ವೈರಲ್ ಆಗಿರುವುದು ಗಮನಕ್ಕೆ ಬಂದಿದೆ. ಯಾರೇ ತಪ್ಪು ಮಾಡಿದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ. ಶಿಕ್ಷಕರ ಕಡೆಯಿಂದ ತಪ್ಪಿದ್ದರೂ ಸಹ ಕ್ರಮ ಆಗುತ್ತದೆ ಎಂದು ಹೇಳಿದ್ದಾರೆ.
I humbly request our honourable Chief Minister @BSBommai sir and honourable education minister @BCNagesh_bjp sir to take necessary action to regulate the atrocious behaviour of the students from a school in Davanagere district. pic.twitter.com/XDMKATeC9u
— Manvita Kamath (@manvitakamath) December 10, 2021
A video showing a group of students of a high school in Davanagere high school allegedly misbehaving and assaulting a teacher during classes had gone viral on social media and netizens demanded stringent action against the students.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm