ಬ್ರೇಕಿಂಗ್ ನ್ಯೂಸ್
14-12-21 01:55 pm HK Desk news ಕರ್ನಾಟಕ
ಬೆಳಗಾವಿ, ಡಿ.14 : ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಬಿಜೆಪಿಗೇ ಸಡ್ಡು ಹೊಡೆದಿದ್ದಾರೆ. ತನ್ನ ತಮ್ಮನನ್ನು ಪಕ್ಷೇತರ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ್ದು, ತಮ್ಮನನ್ನು ಗೆಲ್ಲಿಸಿಕೊಂಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿಯೂ ಗೆಲುವು ಕಂಡಿದ್ದಾರೆ. ಆಜಡಳಿತಾರೂಢ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗವಾಗಿದೆ.
ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗೆಲ್ಲುವ ಅವಕಾಶ ಇತ್ತು. ತನ್ನ ತಮ್ಮನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದರು. ಆದರೆ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತನ್ನ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳಕರ್ ಬಣದ ವ್ಯಕ್ತಿಯಾಗಿದ್ದರಿಂದ ಕಾಂಗ್ರೆಸ್ ಸೋಲಿಸುವುದೇ ತನ್ನ ಗುರಿಯೆಂದು ರಮೇಶ್ ಜಾರಕಿಹೊಳಿ ತೊಡೆ ತಟ್ಟಿದ್ದರು.
ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿ ಪರವಾಗಿಯೇ ರಮೇಶ್ ಜಾರಕಿಹೊಳಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದರು. ಆದರೆ, ಫಲಿತಾಂಶದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅತಿ ಹೆಚ್ಚು ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿಯನ್ನು ಮೊದಲಿಗೆ ವಿಜಯಿ ಎಂದು ಘೋಷಣೆ ಮಾಡಿದರೆ, ಎರಡನೇ ಅತಿ ಹೆಚ್ಚು ಮತ ಗಳಿಸಿದ ಲಖನ್ ಜಾರಕಿಹೊಳಿ ಅವರನ್ನೂ ವಿಜಯಿ ಎಂದು ಘೋಷಣೆ ಮಾಡಲಾಗಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದು ಆಡಳಿತಾರೂಢರಿಗೆ ತೀವ್ರ ಮುಖಭಂಗ ಆಗಿದೆ.
Belagavi Ramesh Jarkiholi makes major victory over BJP Candidate for MLC Elections. It has been a great victory over Bjp by Ramesh Jarkiholi in Belagavi, Karnataka.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 04:36 pm
Mangalore Correspondent
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm