ಬ್ರೇಕಿಂಗ್ ನ್ಯೂಸ್
14-12-21 01:55 pm HK Desk news ಕರ್ನಾಟಕ
ಬೆಳಗಾವಿ, ಡಿ.14 : ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಬಿಜೆಪಿಗೇ ಸಡ್ಡು ಹೊಡೆದಿದ್ದಾರೆ. ತನ್ನ ತಮ್ಮನನ್ನು ಪಕ್ಷೇತರ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ್ದು, ತಮ್ಮನನ್ನು ಗೆಲ್ಲಿಸಿಕೊಂಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿಯೂ ಗೆಲುವು ಕಂಡಿದ್ದಾರೆ. ಆಜಡಳಿತಾರೂಢ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗವಾಗಿದೆ.
ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗೆಲ್ಲುವ ಅವಕಾಶ ಇತ್ತು. ತನ್ನ ತಮ್ಮನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದರು. ಆದರೆ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತನ್ನ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳಕರ್ ಬಣದ ವ್ಯಕ್ತಿಯಾಗಿದ್ದರಿಂದ ಕಾಂಗ್ರೆಸ್ ಸೋಲಿಸುವುದೇ ತನ್ನ ಗುರಿಯೆಂದು ರಮೇಶ್ ಜಾರಕಿಹೊಳಿ ತೊಡೆ ತಟ್ಟಿದ್ದರು.



ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿ ಪರವಾಗಿಯೇ ರಮೇಶ್ ಜಾರಕಿಹೊಳಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದರು. ಆದರೆ, ಫಲಿತಾಂಶದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅತಿ ಹೆಚ್ಚು ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿಯನ್ನು ಮೊದಲಿಗೆ ವಿಜಯಿ ಎಂದು ಘೋಷಣೆ ಮಾಡಿದರೆ, ಎರಡನೇ ಅತಿ ಹೆಚ್ಚು ಮತ ಗಳಿಸಿದ ಲಖನ್ ಜಾರಕಿಹೊಳಿ ಅವರನ್ನೂ ವಿಜಯಿ ಎಂದು ಘೋಷಣೆ ಮಾಡಲಾಗಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದು ಆಡಳಿತಾರೂಢರಿಗೆ ತೀವ್ರ ಮುಖಭಂಗ ಆಗಿದೆ.
Belagavi Ramesh Jarkiholi makes major victory over BJP Candidate for MLC Elections. It has been a great victory over Bjp by Ramesh Jarkiholi in Belagavi, Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm