ಬ್ರೇಕಿಂಗ್ ನ್ಯೂಸ್
14-12-21 01:55 pm HK Desk news ಕರ್ನಾಟಕ
ಬೆಳಗಾವಿ, ಡಿ.14 : ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಬಿಜೆಪಿಗೇ ಸಡ್ಡು ಹೊಡೆದಿದ್ದಾರೆ. ತನ್ನ ತಮ್ಮನನ್ನು ಪಕ್ಷೇತರ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ್ದು, ತಮ್ಮನನ್ನು ಗೆಲ್ಲಿಸಿಕೊಂಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿಯೂ ಗೆಲುವು ಕಂಡಿದ್ದಾರೆ. ಆಜಡಳಿತಾರೂಢ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗವಾಗಿದೆ.
ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗೆಲ್ಲುವ ಅವಕಾಶ ಇತ್ತು. ತನ್ನ ತಮ್ಮನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದರು. ಆದರೆ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತನ್ನ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳಕರ್ ಬಣದ ವ್ಯಕ್ತಿಯಾಗಿದ್ದರಿಂದ ಕಾಂಗ್ರೆಸ್ ಸೋಲಿಸುವುದೇ ತನ್ನ ಗುರಿಯೆಂದು ರಮೇಶ್ ಜಾರಕಿಹೊಳಿ ತೊಡೆ ತಟ್ಟಿದ್ದರು.
ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿ ಪರವಾಗಿಯೇ ರಮೇಶ್ ಜಾರಕಿಹೊಳಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದರು. ಆದರೆ, ಫಲಿತಾಂಶದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅತಿ ಹೆಚ್ಚು ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿಯನ್ನು ಮೊದಲಿಗೆ ವಿಜಯಿ ಎಂದು ಘೋಷಣೆ ಮಾಡಿದರೆ, ಎರಡನೇ ಅತಿ ಹೆಚ್ಚು ಮತ ಗಳಿಸಿದ ಲಖನ್ ಜಾರಕಿಹೊಳಿ ಅವರನ್ನೂ ವಿಜಯಿ ಎಂದು ಘೋಷಣೆ ಮಾಡಲಾಗಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದು ಆಡಳಿತಾರೂಢರಿಗೆ ತೀವ್ರ ಮುಖಭಂಗ ಆಗಿದೆ.
Belagavi Ramesh Jarkiholi makes major victory over BJP Candidate for MLC Elections. It has been a great victory over Bjp by Ramesh Jarkiholi in Belagavi, Karnataka.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm