ಬ್ರೇಕಿಂಗ್ ನ್ಯೂಸ್
16-12-21 02:45 pm HK Desk news ಕರ್ನಾಟಕ
Photo credits : Headline Karnataka
ಬಾಗಲಕೋಟೆ, ಡಿ.16 : ಪ್ರಶಸ್ತಿಗಳ ರಾಜ, ಬೆಟ್ಟದ ಹುಲಿ ಎಂದೇ ಹೆಸರಾಗಿದ್ದ ಅಭಿಮಾನಿಗಳ ಪಾಲಿನ ನೆಚ್ಚಿನ ಟಗರು ಅನಾರೋಗ್ಯದಿಂದ ಸಾವು ಕಂಡಿದ್ದು ನೂರಾರು ಜನರು ಸೇರಿ ಶವಯಾತ್ರೆ ಮೆರವಣಿಗೆ ನಡೆಸಿದ್ದಾರೆ.
ಆಕರ್ಷಕವಾಗಿದ್ದ ಟಗರನ್ನು ಐದು ಲಕ್ಷ ರೂ. ಕೊಟ್ಟು ಖರೀದಿಸಲಾಗಿತ್ತು. ಮಾಲೀಕ ಅದನ್ನು ಖರೀದಿಸಿ ಮನೆ ಮಗನಂತೆ ನೋಡಿಕೊಂಡಿದ್ದಲ್ಲದೆ ವಿವಿಧ ಕಡೆಗಳಲ್ಲಿ ಸ್ಪರ್ಧೆಗೆ ಕೊಂಡೊಯ್ದು ಜನಮೆಚ್ಚುಗೆ ಪಡೆದಿದ್ದ. ಅನಾರೋಗ್ಯದಿಂದ ಟಗರು ದಿಢೀರ್ ಆಗಿ ಸತ್ತಿದ್ದಕ್ಕೆ ಮಾಲೀಕ ಪಾಂಡು ಗೋಳಾಡಿ ಅತ್ತಿದ್ದಾನೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಪಾಂಡು ಟಗರನ್ನು 7 ವರ್ಷಗಳ ಹಿಂದೆ 5 ಲಕ್ಷ ರೂ. ಕೊಟ್ಟು ಖರೀದಿಸಿದ್ದ. ಪ್ರತಿ ಬಾರಿ ಟಗರಿನ ಕಾಳಗದಲ್ಲಿ ಈ ಬೆಟ್ಟದ ಹುಲಿಯದ್ದೆ ದರ್ಬಾರ್ ಆಗಿತ್ತು. ಜನರು ಪಂಥ ಕಟ್ಟಿ ಗೆದ್ದು ಈ ಟಗರಿನ ಅಭಿಮಾನಿಗಳಾಗಿದ್ದರು. ಮೈಸೂರು ದಸರಾ ಸೇರಿ ರಾಜ್ಯ ಮತ್ತು ಹೊರ ರಾಜ್ಯಗಳ ಟಗರಿನ ಕಾಳಗದಲ್ಲಿ ಬೆಟ್ಟದ ಹುಲಿ ಭಾರೀ ಹೆಸರು ಮಾಡಿತ್ತು.
ಈವರೆಗೆ 80 ಕ್ಕೂ ಅಧಿಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ಟಗರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತನ್ನದೇ ಅಭಿಮಾನಿಗಳನ್ನು ಹೊಂದಿತ್ತು. ಟಗರು ಸತ್ತ ಸುದ್ದಿ ಕೇಳಿ ಕಲಹಳ್ಳಿಗೆ ಬಂದ ನೂರಾರು ಅಭಿಮಾನಿಗಳು ಆಗಮಿಸಿದ್ದು ಕಣ್ಣೀರಿಟ್ಟಿದ್ದಾರೆ.

ಗ್ರಾಮದಲ್ಲಿ ಮೃತಪಟ್ಟ ಟಗರನ್ನು ಶೃಂಗರಿಸಿ ಟ್ರ್ಯಾಕ್ಟರ್ ನಲ್ಲಿ ಮೆರವಣಿಗೆ ಮಾಡಿದ್ದಾರೆ. ಟಗರಿಗೆ ಭಂಡಾರ ಬಳಿದು ದುಃಖದಿಂದ ಮೆರವಣಿಗೆ ನಡೆಸಿದ್ದು ಅಂತಿಮ ಸಂಸ್ಕಾರದಲ್ಲಿ ನೂರಾರು ಜನರು ಭಾಗಿಯಾಗಿದ್ದಾರೆ.

ಗದಗ, ಧಾರವಾಡ, ಮೈಸೂರು, ಗಜೇಂದ್ರಗಡ ಸೇರಿ ವಿವಿಧೆಡೆಯಿಂದ ಟಗರಿನ ಅಂತಿಮ ದರ್ಶನಕ್ಕೆ ಟಗರು ಅಭಿಮಾನಿಗಳು ಬಂದಿದ್ದರು. ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಅಭಿಮಾನಿ ಯುವಕರು ಸೇರಿ ಟಗರಿನ ಕಟೌಟ್ ಕಟ್ಟಿ, ದೀಪ ಬೆಳಗಿ ಶ್ರದ್ದಾಂಜಲಿ ಸಲ್ಲಿಸಿ ಅಭಿಮಾನ ಮೆರೆದಿದ್ದಾರೆ.
Bagalkote Five lakh worth Ram dies fans in tears last rites performed with great honour. Pictures of this has gone viral on social media
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm