ಬ್ರೇಕಿಂಗ್ ನ್ಯೂಸ್
17-12-21 02:37 pm HK Desk news ಕರ್ನಾಟಕ
ಬೆಂಗಳೂರು, ಡಿ.17 : ರಾಜ್ಯ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಾಧೀಶ ರಿತುರಾಜ್ ಅವಸ್ಥಿ ನೇತೃತ್ವದ ಪೀಠ ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದು, ರಾಜ್ಯ ಸರಕಾರ ಪದವಿ ಹಂತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವಂತಿಲ್ಲ. ಈಗಾಗ್ಲೇ ವಿದ್ಯಾರ್ಥಿಗಳು ಯಾವ ಭಾಷೆಯನ್ನು ಕಲಿಯಲು ಆಯ್ಕೆ ಮಾಡಿಕೊಂಡಿದ್ದಾರೋ, ಅದನ್ನು ಮುಂದುವರಿಸಬಹುದು. ಮುಂದಿನ ಆದೇಶದ ವರೆಗೆ ಇದೇ ಸ್ಥಿತಿಯನ್ನು ಕಾಯ್ದುಕೊಳ್ಳಬೇಕು ಎಂದು ತೀರ್ಪು ನೀಡಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನೆಪದಲ್ಲಿ ರಾಜ್ಯ ಸರಕಾರ ಕನ್ನಡವನ್ನು ಪದವಿ ಹಂತದಲ್ಲಿ ಮೊದಲ ಭಾಷೆಯಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿದೆ. ಸರಕಾರಿ ಕಾಲೇಜುಗಳಲ್ಲಿ ಈಗಾಗಲೇ ಕನ್ನಡ ಕಲಿಕೆಯನ್ನು ಜಾರಿಗೊಳಿಸಿದ್ದು, ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಆಕ್ಷೇಪ ಕೇಳಿಬಂದಿದೆ. ಸಂಸ್ಕಾರ ಭಾರತಿ (ಕರ್ನಾಟಕ) ಟ್ರಸ್ಟ್ ಸೇರಿದಂತೆ ಸಂಸ್ಕೃತ ಭಾಷೆ ಕಲಿಸುವ ಇತರ ಮೂರು ಶಿಕ್ಷಣ ಸಂಸ್ಥೆಗಳು ಮತ್ತು ಐದು ಮಂದಿ ವಿದ್ಯಾರ್ಥಿಗಳು ರಾಜ್ಯ ಸರಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಅರ್ಜಿ ಹಾಕಿದ್ದರು.
ರಾಜ್ಯ ಸರಕಾರದ ಪರವಾಗಿ ಹಾಜರಾಗಿದ್ದ ಅಡ್ವಕೇಟ್ ಜನರಲ್ ಪ್ರಭುಲಿಂಗ ನವಾದಗಿ, ಅರ್ಜಿ ಸಲ್ಲಿಸಿರುವ ಐದು ವಿದ್ಯಾರ್ಥಿಗಳು 12ನೇ ತರಗತಿ ವರೆಗೆ ಕನ್ನಡದಲ್ಲಿಯೇ ಕಲಿತಿದ್ದು, ಪದವಿ ಹಂತದಲ್ಲಿ ಕನ್ನಡ ಕಲಿಯುವುದಕ್ಕೆ ತೊಂದರೆಯಿಲ್ಲ ಎಂದಿದ್ದಾರೆ ಎಂಬುದಾಗಿ ಕೋರ್ಟ್ ಗಮನಕ್ಕೆ ತಂದರು. ಇದರ ಬಗ್ಗೆ ಆಕ್ಷೇಪ ಎತ್ತಿದ ವಿದ್ಯಾರ್ಥಿಗಳ ಪರ ವಕೀಲ ಶ್ರೀಧರ್ ಪ್ರಭು, ಕೋರ್ಟ್ ಈಗಾಗಲೇ ಪದವಿ ಹಂತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಈ ಸಾಲಿನ ವಿದ್ಯಾರ್ಥಿಗಳ ಪ್ರವೇಶಾತಿ ವಿಚಾರದಲ್ಲಿ ಗೊಂದಲ ಆಗದಂತೆ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಕೇಳಿಕೊಂಡರು.
ಕೇಂದ್ರ ಸರಕಾರದ ಪರ ಹಾಜರಾಗಿದ್ದ ಅಡಿಶನಲ್ ಸಾಲಿಸಿಟರ್ ಜನರಲ್ ಎಂ.ಬಿ.ನರಗುಂದ್, ಎನ್ ಇಪಿ ಜಾರಿ ವಿಚಾರದಲ್ಲಿ ಕೇಂದ್ರ ಸರಕಾರ ಕನ್ನಡ ಕಲಿಕೆಯನ್ನು ಉನ್ನತ ಶಿಕ್ಷಣದಲ್ಲಿ ಕಡ್ಡಾಯಗೊಳಿಸಿರುವುದು ಏಕೆ ಎಂಬ ಬಗ್ಗೆ ಸ್ಪಷ್ಟನೆ ನೀಡಲು ತನ್ನಿಂದ ಸಾಧ್ಯವಾಗದು. ಈ ಬಗ್ಗೆ ಉತ್ತರ ನೀಡಲು ನಾಲ್ಕು ವಾರಗಳ ಅವಕಾಶ ನೀಡಬೇಕು ಎಂದು ಕೇಳಿದ್ದು ಅದಕ್ಕೆ ಕೋರ್ಟ್ ಒಪ್ಪಿಗೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
The Karnataka High Court has directed the state government not to make Kannada language compulsory for degree students until further orders.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm