ಬ್ರೇಕಿಂಗ್ ನ್ಯೂಸ್
17-12-21 11:11 pm HK Desk news ಕರ್ನಾಟಕ
ಬೆಳಗಾವಿ, ಡಿ.17 : ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿರುವುದನ್ನು ವಿರೋಧಿಸಿ ಭಾರತೀಯ ಕ್ರಿಸ್ತ ಒಕ್ಕೂಟದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರು ಪ್ರಶಾಂತ ಜತ್ತನ್ನ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಭಟನಾ ನಿರತ ಕ್ರಿಶ್ಚಿಯನ್ನರ ಒಕ್ಕೂಟದ ಪ್ರತಿನಿಧಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರಕಾರ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದೆ. ಲವ್ ಜಿಹಾದ್, ಮತಾಂತರ ವಿಚಾರಗಳನ್ನು ಮುಂದಿಟ್ಟು ಹಿಡನ್ ಅಜೆಂಡಾವನ್ನು ಸಾಧಿಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ.



ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನೂರು ಶತ ಅಧಿಕಾರಕ್ಕೆ ಬರಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಇದರ ಮುನ್ಸೂಚನೆ ಸಿಕ್ಕಿದೆ. ಒಟ್ಟು 94 ಸಾವಿರ ಮತಗಳಲ್ಲಿ 44 ಸಾವಿರ ಮತ ಕಾಂಗ್ರೆಸ್ಗೆ ಲಭಿಸಿದೆ. ಬಿಜೆಪಿಗೆ ಸಿಕ್ಕಿದ್ದು 37 ಸಾವಿರ. ಜೆಡಿಎಸ್ ಹತ್ತು ಸಾವಿರ ಮತ ಗಳಿಸಿದೆ. ಇದು ಜನರ ಭಾವನೆ ಕಾಂಗ್ರೆಸ್ ಪರವಾಗಿರುವುದನ್ನು ಸೂಚಿಸಿದೆ ಎಂದರು.


ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಈಗ ಮತಾಂತರ ನಿಷೇಧ ಕಾಯ್ದೆಯ ಅಗತ್ಯ ಇದೆಯೇ.. ಬಲವಂತದ ಮತಾಂತರ ನಡೆಯುತ್ತಿದ್ದರೆ ಪೊಲೀಸ್ ಕೇಸು ದಾಖಲಿಸಿ, ಅರೆಸ್ಟ್ ಮಾಡಬಹುದು. ಕಾನೂನಿನಲ್ಲಿ ಅವಕಾಶ ಇದೆ ಎಂದ ಸಿದ್ದರಾಮಯ್ಯ, ಗೂಳಿಹಟ್ಟಿ ಶೇಖರ್ ಮತಾಂತರ ವಿಚಾರದ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ಪೊಲೀಸ್ ದೂರು ಯಾಕೆ ಕೊಟ್ಟಿಲ್ಲ. ಅವರ ತಾಯಿಯೂ ದೂರು ಕೊಟ್ಟಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದರು.


ನಾವು ಅಧಿಕಾರಕ್ಕೆ ಬಂದಲ್ಲಿ ಈಗ ಮಸೂದೆ ಪಾಸ್ ಮಾಡಿದರೂ ಕೂಡಲೇ ಅದನ್ನು ರದ್ದು ಪಡಿಸುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯ, ಅದಕ್ಕೆ ಅವಕಾಶ ಬರುವುದಿಲ್ಲ. ಕಾನೂನು ಆಗಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.
ಕ್ರಿಶ್ಚಿಯನ್ ಒಕ್ಕೂಟದ ಪ್ರತಿನಿಧಿಗಳು ಪ್ರತಿಭಟನೆ ಬಳಿಕ ಈ ಕುರಿತ ಮನವಿಯನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮೂಲಕ ಸರಕಾರಕ್ಕೆ ಸಲ್ಲಿಸಿದ್ದಾರೆ.
Expressing opposition to the proposed anti-conversion Bill by the State Government the Christian community under the leadership of Prashanth Jathanna State president of Bharathiya Christa Okkuta and in association with UFC Belagavi staged a hunger strike during the winter session in front of Suvarna Soudha, Belagavi on December 17.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm