ಬ್ರೇಕಿಂಗ್ ನ್ಯೂಸ್
18-12-21 03:16 pm HK Desk news ಕರ್ನಾಟಕ
ಬೆಳಗಾವಿ, ಡಿ.18 : ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅತಿರೇಕದ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಿರ್ದಾಕ್ಷಿಣ್ಯ ಕ್ರಮಕ್ಕೆ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆ ಪುಂಡರನ್ನು ಸೆದೆ ಬಡಿಯುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ.
ಕಲ್ಲು ತೂರಾಟ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ.
ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದಲ್ಲ. ಈ ರೀತಿಯ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ಈ ಕೃತ್ಯ ನಡೆದಿರುವುದರಿಂದ ಈ ರೀತಿಯ ಘಟನೆ ಉದ್ದೇಶಪೂರ್ವಕವೇ, ಅಚಾನಕ್ಕಾಗಿ ನಡೆದಿತ್ತೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Chief Minister Basavaraj Bommai has strongly condemned vandalism by miscreants at Belagavi and assured stringent action against the persons responsible at the earliest. The statue of Sangolli Rayanna installed at Kanakdas Colony in the Angol suburb was reportedly vandalized by miscreants in the early hours of Saturday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm