ಬ್ರೇಕಿಂಗ್ ನ್ಯೂಸ್
18-12-21 03:16 pm HK Desk news ಕರ್ನಾಟಕ
ಬೆಳಗಾವಿ, ಡಿ.18 : ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅತಿರೇಕದ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಿರ್ದಾಕ್ಷಿಣ್ಯ ಕ್ರಮಕ್ಕೆ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆ ಪುಂಡರನ್ನು ಸೆದೆ ಬಡಿಯುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ.
ಕಲ್ಲು ತೂರಾಟ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ.
ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದಲ್ಲ. ಈ ರೀತಿಯ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ಈ ಕೃತ್ಯ ನಡೆದಿರುವುದರಿಂದ ಈ ರೀತಿಯ ಘಟನೆ ಉದ್ದೇಶಪೂರ್ವಕವೇ, ಅಚಾನಕ್ಕಾಗಿ ನಡೆದಿತ್ತೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Chief Minister Basavaraj Bommai has strongly condemned vandalism by miscreants at Belagavi and assured stringent action against the persons responsible at the earliest. The statue of Sangolli Rayanna installed at Kanakdas Colony in the Angol suburb was reportedly vandalized by miscreants in the early hours of Saturday.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 01:00 pm
HK News Desk
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm