ಬ್ರೇಕಿಂಗ್ ನ್ಯೂಸ್
19-12-21 09:19 pm HK Desk news ಕರ್ನಾಟಕ
ಶಿವಮೊಗ್ಗ, ಡಿ.19: ಸಿಟಿ ರವಿ ಬಗ್ಗೆ ಕೋಟಿ ರವಿ ಎಂದು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಚಿವ ಕೆ.ಎಸ್. ಈಶ್ವರಪ್ಪ ಗರಂ ಆಗಿದ್ದಾರೆ. ಅವರ ಬಗ್ಗೆ ಏನು ಹೇಳಬೇಕೋ ಅರ್ಥವಾಗುತ್ತಿಲ್ಲ. ಸಿ.ಟಿ.ರವಿ ರಾಷ್ಟ್ರೀಯ ಪಕ್ಷದ ಪ್ರಧಾನ ಕಾರ್ಯದರ್ಶಿ. ಅವರ ಮೇಲೆ ಒಂದೂ ಕೇಸಿಲ್ಲ. ಡಿ.ಕೆ.ಶಿವಕುಮಾರ್ ಅವರಂತೆ ಸಿ.ಟಿ.ರವಿ ಏನೂ ತಿಹಾರ್ ಜೈಲಿಗೆ ಹೋಗಿ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಿಟಿ ರವಿಯ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಗೆ ಏನು ಅಧಿಕಾರವಿದೆ. ಸಿ.ಟಿ.ರವಿ ಲೂಟಿ ರವಿ ಎನ್ನುತ್ತೀರಲ್ಲಾ.. ತಿಹಾರ್ ಜೈಲಿಗೆ ಹೋಗಿ ಬಂದವರು ನೀವು. ನಿಮ್ಮ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಇದರ ಕೇಸು ಇನ್ನೂ ನಡೆಯುತ್ತಿದೆ. ಜಾಮೀನು ಮೇಲೆ ಡಿ.ಕೆ.ಶಿವಕುಮಾರ್ ಹೊರಗಡೆ ಇದ್ದಾರೆ. ಹೀಗಿದ್ದರೂ ಸಿ.ಟಿ.ರವಿಯನ್ನು ಲೂಟಿ ರವಿ ಎನ್ನುತ್ತಾರೆ. ಡಿ.ಕೆ.ಶಿವಕುಮಾರ್ ಕೂಡಲೇ ಸಿ.ಟಿ.ರವಿ ಹಾಗೂ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಬೆಳಗಾವಿ ಗಲಾಟೆಗೆ ಕನ್ನಡಿಗರೇ ಕಾರಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿಗೆ ಪತ್ರ ಬರೆದ ವಿಷಯಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ , ಮಹಾರಾಷ್ಟ್ರ ಸಿಎಂ ಏನೂ ದೇವರಲ್ಲ. ಕಾಂಗ್ರೆಸ್ ನವರು ಈಗ ಉತ್ತರ ಕೊಡಬೇಕು. ಮಹಾರಾಷ್ಟ್ರದಲ್ಲಿರುವುದು ಶಿವಸೇನೆ ಹಾಗೂ ಕಾಂಗ್ರೆಸ್ ಸರ್ಕಾರ ಎಂದು ಹೇಳಿದ್ದಾರೆ.
ಗೂಂಡಾಗಿರಿಯನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ. ನಾವು ಯಾರ ಸುದ್ದಿಗೂ ಹೋಗುವುದಿಲ್ಲ. ನಮ್ಮ ಸುದ್ದಿಗೆ ಯಾರಾದರೂ ಬಂದರೆ ಸುಮ್ಮನೆ ಬಿಡುವುದಿಲ್ಲ. ಕರ್ನಾಟಕದ ನೆಲ, ಜಲ, ಭಾಷೆ ವಿಷಯಕ್ಕೆ ಎಲ್ಲ ಪಕ್ಷಗಳು ಒಂದಾಗಿಯೇ ಇರುತ್ತೇವೆ. ಗೂಂಡಾಗಿರಿ ಮಾಡಿದ್ದು, ಕನ್ನಡದ ಧ್ವಜ ಸುಟ್ಟಿದ್ದು, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿದ್ದು ಮರಾಠಿಗರೇ. ಇಂಥವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ, ಬಿಡುವುದೇ ಇಲ್ಲ. ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿರುವುದನ್ನು ಪ್ರಧಾನಮಂತ್ರಿಗೆ ತಿಳಿಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದರು.
Eshwarappa slams DK Shivakumar for mocking CT Ravi. CT Ravi hasn't gone to Tihar Jail like DK Shivakumar he added.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm