ಬ್ರೇಕಿಂಗ್ ನ್ಯೂಸ್
20-12-21 01:52 pm HK Desk news ಕರ್ನಾಟಕ
ಹಾಸನ, ಡಿ.20: ಕುಡಿದ ಮತ್ತಿನಲ್ಲಿದ್ದ ಲಾರಿ ಚಾಲಕನೊಬ್ಬ ಬೈಕಿಗೆ ಡಿಕ್ಕಿಯಾಗಿ ತಾಯಿ, ಮಕ್ಕಳ ದುರಂತ ಸಾವಿಗೆ ಕಾರಣವಾದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು ಲಾರಿ ಚಾಲಕ ನಿಯಂತ್ರಣ ತಪ್ಪಿ ನುಗ್ಗಿ ಬಂದಿದ್ದು, ಹಲವು ವಾಹನಗಳಿಗೆ ಡಿಕ್ಕಿಯಾಗಿಸಿದ್ದಾನೆ. ಈ ವೇಳೆ, ಇಬ್ಬರು ಅವಳಿ ಮಕ್ಕಳ ಜೊತೆ ದಂಪತಿ ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದು, ಮಕ್ಕಳಿಬ್ಬರು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮಕ್ಕಳನ್ನು ಮೂರು ವರ್ಷ ಪ್ರಾಯದ ಪ್ರಣತಿ ಮತ್ತು ಪ್ರಣವ್ ಎಂದು ಗುರುತಿಸಲಾಗಿದ್ದು, ದೇಹ ಸ್ಥಿತಿ ಛಿದ್ರವಾಗಿತ್ತು. ತಾಯಿ ಜ್ಯೋತಿ ಕೂಡ ಲಾರಿಯಡಿಗೆ ಬಿದ್ದು ಭೀಕರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮಕ್ಕಳ ತಂದೆ ಶಿವಾನಂದ್ ಸ್ಥಿತಿಯೂ ಚಿಂತಾಜನಕವಾಗಿದ್ದು ಒಂದೇ ಕುಟುಂಬದ ಪಾಲಿಗೆ ಲಾರಿ ಚಾಲಕ ಜವರಾಯನಾಗಿ ಬಂದೆರಗಿದ್ದಾನೆ.
ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕಿನಲ್ಲಿದ್ದ ನಾಲ್ವರು ಕೂಡ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ಮೇಲಿಂದಲೇ ಲಾರಿ ಚಲಿಸಿದೆ. ಅಲ್ಲದೆ, ಸ್ವಲ್ಪ ದೂರದ ವರೆಗೂ ಲಾರಿ ಚಲಿಸಿದ್ದು ಇವರನ್ನು ಎಳಕೊಂಡೇ ಚಾಲಕ ಹೋಗಿದ್ದಾನೆ. ಬೈಕ್ ಸೇರಿದಂತೆ ಇತರ ನಾಲ್ಕು ವಾಹನಗಳಿಗೆ ಲಾರಿ ಡಿಕ್ಕಿಯಾಗಿತ್ತು. ಕುಡಿದು ಟೈಟ್ ಆಗಿದ್ದ ಲಾರಿ ಚಾಲಕ ಸ್ಥಿಮಿತ ಕಳಕೊಂಡಿದ್ದ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಮತ್ತು ಸಾರ್ವಜನಿಕರು ಆತನನ್ನು ಹಿಡಿದು ಬಂಧಿಸಿದ್ದಾರೆ.
In a case of drunk driving, a truck driver hit several vehicles before colliding with a bike, killing three of the four riders, in Karnataka’s Hassan district. The three deceased include twins and their mother, police said. The incident took place late on Sunday, December 19. The deceased have been identified as three-year-olds Pranathi and Pranav, and their mother Jyothi. The condition of Shivanand, the deceased children's father, is said to be critical.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm