ಬ್ರೇಕಿಂಗ್ ನ್ಯೂಸ್
21-12-21 11:03 pm HK Desk news ಕರ್ನಾಟಕ
ಬೆಳಗಾವಿ, ಡಿ.21 : ಪ್ರತಿಪಕ್ಷಗಳ ಸಭಾತ್ಯಾಗ, ಗದ್ದಲದ ನಡುವೆಯೇ ವಿಧಾನಸಭಾ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಾಗಿದೆ. ಕರ್ನಾಟಕ ಧಾರ್ಮಿಕ ಹಕ್ಕು ರಕ್ಷಣಾ ವಿಧೇಯಕ- 2021 ಅನ್ನು ವಿಪಕ್ಷ ವಿರೋಧದ ನಡುವೆಯೇ ಬಿಜೆಪಿ ಸರಕಾರ ಅಧಿವೇಶನದಲ್ಲಿ ಮಂಡಿಸಿದ್ದು ಬುಧವಾರ ಚರ್ಚೆಗೆ ಬರಲಿದೆ.
ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕವನ್ನು ತರಾತುರಿಯಲ್ಲಿ ಮಂಡಿಸಿದ್ದು, ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ಷೇಪ ಎತ್ತಿದ್ದಾರೆ. ಅಜೆಂಡಾದಲ್ಲಿ ಇಲ್ಲದ ವಿಚಾರವನ್ನು ಹೇಗೆ ಮಂಡನೆ ಮಾಡಿದ್ರಿ. ಇದು ಆರ್ಟಿಕಲ್ 25ರ ಪ್ರಕಾರ ಕಾನೂನು ಉಲ್ಲಂಘನೆ ಎಂದು ಹರಿಹಾಯ್ದಿದ್ದಾರೆ.

ಹೊಸ ಕಾಯ್ದೆ ಪ್ರಕಾರ, ಬಲವಂತ, ಆಮಿಷ, ಇನ್ನಿತರ ತಪ್ಪಾದ ಉದ್ದೇಶಗಳಿಂದ ಯಾವುದೇ ವ್ಯಕ್ತಿಯನ್ನು ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವುದನ್ನು ವಿರೋಧಿಸುತ್ತದೆ. ಈಗಾಗ್ಲೇ ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ಜಾರಿಗೆ ತಂದಿರುವ ಇದೇ ರೀತಿಯ ಕಾನೂನಿಗಿಂತ ಕರ್ನಾಟಕದ ಮಸೂದೆ ಹೆಚ್ಚು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಈ ಕಾಯ್ದೆಯದಲ್ಲಿ ಕನಿಷಅಠ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಲು ಅವಕಾಶ ನೀಡಲಾಗಿದೆ. ಈ ರೀತಿಯ ಮತಾಂತರ ಆದಲ್ಲಿ ಸಂಬಂಧಿತ ವ್ಯಕ್ತಿಯ ಹೆತ್ತವರು, ಸೋದರ- ಸೋದರಿ ಹೀಗೆ ರಕ್ತ ಸಂಬಂಧ ಹೊಂದಿರುವ ಯಾರು ಕೂಡ ದೂರು ನೀಡಲು ಸಾಧ್ಯವಿದ್ದು, ಪೊಲೀಸರು ಎಫ್ಐಆರ್ ದಾಖಲಿಸಬೇಕಾಗುತ್ತದೆ.
ಹೊಸ ಕಾಯ್ದೆಯನ್ನು ಸೋಮವಾರ ಸಚಿವ ಸಂಪುಟದಲ್ಲಿ ಚರ್ಚಿಸಿ, ಪಾಸ್ ಮಾಡಲಾಗಿತ್ತು. ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಈಗಾಗ್ಲೇ ಕಾಂಗ್ರೆಸ್ ಹೇಳಿದ್ದು, ಬುಧವಾರ ತೀವ್ರ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆಯಿದೆ.
The Karnataka government on Tuesday tabled the controversial Karnataka Protection of Right to Freedom of Religion Bill, 2021 popularly known as Anti-Conversion bill in the assembly in Suvarna Vidhan Soudha at Belagavi. The discussion on the proposed bill will take place on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am