ಬ್ರೇಕಿಂಗ್ ನ್ಯೂಸ್
21-12-21 11:03 pm HK Desk news ಕರ್ನಾಟಕ
ಬೆಳಗಾವಿ, ಡಿ.21 : ಪ್ರತಿಪಕ್ಷಗಳ ಸಭಾತ್ಯಾಗ, ಗದ್ದಲದ ನಡುವೆಯೇ ವಿಧಾನಸಭಾ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಾಗಿದೆ. ಕರ್ನಾಟಕ ಧಾರ್ಮಿಕ ಹಕ್ಕು ರಕ್ಷಣಾ ವಿಧೇಯಕ- 2021 ಅನ್ನು ವಿಪಕ್ಷ ವಿರೋಧದ ನಡುವೆಯೇ ಬಿಜೆಪಿ ಸರಕಾರ ಅಧಿವೇಶನದಲ್ಲಿ ಮಂಡಿಸಿದ್ದು ಬುಧವಾರ ಚರ್ಚೆಗೆ ಬರಲಿದೆ.
ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕವನ್ನು ತರಾತುರಿಯಲ್ಲಿ ಮಂಡಿಸಿದ್ದು, ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ಷೇಪ ಎತ್ತಿದ್ದಾರೆ. ಅಜೆಂಡಾದಲ್ಲಿ ಇಲ್ಲದ ವಿಚಾರವನ್ನು ಹೇಗೆ ಮಂಡನೆ ಮಾಡಿದ್ರಿ. ಇದು ಆರ್ಟಿಕಲ್ 25ರ ಪ್ರಕಾರ ಕಾನೂನು ಉಲ್ಲಂಘನೆ ಎಂದು ಹರಿಹಾಯ್ದಿದ್ದಾರೆ.

ಹೊಸ ಕಾಯ್ದೆ ಪ್ರಕಾರ, ಬಲವಂತ, ಆಮಿಷ, ಇನ್ನಿತರ ತಪ್ಪಾದ ಉದ್ದೇಶಗಳಿಂದ ಯಾವುದೇ ವ್ಯಕ್ತಿಯನ್ನು ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡುವುದನ್ನು ವಿರೋಧಿಸುತ್ತದೆ. ಈಗಾಗ್ಲೇ ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ಜಾರಿಗೆ ತಂದಿರುವ ಇದೇ ರೀತಿಯ ಕಾನೂನಿಗಿಂತ ಕರ್ನಾಟಕದ ಮಸೂದೆ ಹೆಚ್ಚು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಈ ಕಾಯ್ದೆಯದಲ್ಲಿ ಕನಿಷಅಠ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಲು ಅವಕಾಶ ನೀಡಲಾಗಿದೆ. ಈ ರೀತಿಯ ಮತಾಂತರ ಆದಲ್ಲಿ ಸಂಬಂಧಿತ ವ್ಯಕ್ತಿಯ ಹೆತ್ತವರು, ಸೋದರ- ಸೋದರಿ ಹೀಗೆ ರಕ್ತ ಸಂಬಂಧ ಹೊಂದಿರುವ ಯಾರು ಕೂಡ ದೂರು ನೀಡಲು ಸಾಧ್ಯವಿದ್ದು, ಪೊಲೀಸರು ಎಫ್ಐಆರ್ ದಾಖಲಿಸಬೇಕಾಗುತ್ತದೆ.
ಹೊಸ ಕಾಯ್ದೆಯನ್ನು ಸೋಮವಾರ ಸಚಿವ ಸಂಪುಟದಲ್ಲಿ ಚರ್ಚಿಸಿ, ಪಾಸ್ ಮಾಡಲಾಗಿತ್ತು. ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಈಗಾಗ್ಲೇ ಕಾಂಗ್ರೆಸ್ ಹೇಳಿದ್ದು, ಬುಧವಾರ ತೀವ್ರ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆಯಿದೆ.
The Karnataka government on Tuesday tabled the controversial Karnataka Protection of Right to Freedom of Religion Bill, 2021 popularly known as Anti-Conversion bill in the assembly in Suvarna Vidhan Soudha at Belagavi. The discussion on the proposed bill will take place on Wednesday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm