ಬ್ರೇಕಿಂಗ್ ನ್ಯೂಸ್
22-12-21 01:08 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.22 : ಚಿಕ್ಕಬಳ್ಳಾಪುರ ಜಿಲ್ಲೆಯ ಮಂಡಿಕಲ್ಲು, ಬೋಗಪರ್ತಿ, ಪೆರೇಸಂದ್ರ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದೆ. ಬೆಳಗ್ಗೆ ಏಳು ಗಂಟೆ ಸುಮಾರಿಗೆ ಎರಡು ಬಾರಿ ಭೂಕಂಪ ದಾಖಲಾಗಿರುವುದನ್ನು ಭೂಕಂಪ ಮಾಪಕ ಕೇಂದ್ರ ದೃಢಪಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಿಂದ 13 ಕಿಮೀ ಉತ್ತರಕ್ಕೆ ಭೂಕಂಪದ ಕೇಂದ್ರ ಬಿಂದು ಇರುವುದಾಗಿ ಮತ್ತು ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆ ದಾಖಲಾಗಿರುವ ಬಗ್ಗೆ ಹೇಳಿದೆ. ಬೆಳಗ್ಗೆ ಕಂಪನದ ಅನುಭವ ಆಗುತ್ತಲೇ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.
ಬೆಳಗ್ಗೆ 7ರಿಂದ 7.30ರ ನಡುವೆ ಚಿಕ್ಕಬಳ್ಳಾಪುರ ಜಿಲ್ಲೆಯ ಹಳ್ಳಿಗಳಲ್ಲಿ ಏನೋ ಸ್ಫೋಟ ಆಗಿರುವ ಶಬ್ದವೂ ಕೇಳಿಬಂದಿತ್ತು. ಭಾರೀ ಶಬ್ದ ಕೇಳಿದ್ದು, ಜನರಿಗೆ ಕಂಪನದ ಅನುಭವವೂ ಆಗಿದೆ. ಶೆಟ್ಟಿಗೆರೆ, ಪಿಲ್ಲಗುಂಡ್ಲಹಳ್ಳಿ, ಬೈಯಪ್ಪನಹಳ್ಳಿ, ಅದನ್ನಗಾರಹಳ್ಳಿ, ರೆಡ್ಡಿಗೊಲ್ಲವಾರಹಳ್ಳಿ, ಪೆರೇಸಂದ್ರ ಗ್ರಾಮದ ಸುತ್ತಮುತ್ತ ಸ್ಫೋಟದ ಶಬ್ದ ಕೇಳಿಬಂದಿದೆ.
ಈ ರೀತಿ ಶಬ್ದ ಕೇಳಿರುವುದನ್ನು ಸ್ಥಳೀಯ ಕೆಲವರು ನೀರಿಲ್ಲದೆ ಒಣಗಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ಏರ್ ಬ್ಲಾಸ್ಟ್ ಆಗಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಹಲವಾರು ಸಮಯಗಳಿಂದ ನೀರು ಇಲ್ಲದೆ ಒಣಗಿ ಹೋಗಿದ್ದ ಬೋರ್ ವೆಲ್ ಗಳಲ್ಲಿ ಗಾಳಿ ನಿಂತಿತ್ತು. ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆಯಾಗಿದ್ದು, ಅಂತರ್ಜಲ ಹೆಚ್ಚಾಗಿದ್ದರಿಂದ ಜಲ ಮರುಪೂರಣ ಆಗಿ ಏರ್ ಬ್ಲಾಸ್ಟ್ ಆಗಿರುವ ಸಾಧ್ಯತೆಯಿದೆ ಎನ್ನುತ್ತಿದ್ದಾರೆ. ಈ ರೀತಿಯ ಶಬ್ದ ಹಿಂದೆಯೂ ಕೇಳಿಬಂದಿತ್ತು.
ಆದರೆ ಈ ಬಾರಿ ಇದೇ ಸಂದರ್ಭದಲ್ಲಿ ಭೂಕಂಪ ಆಗಿರುವುದನ್ನೂ ಭೂಗರ್ಭ ಶಾಸ್ತ್ರಜ್ಞರು ದೃಢಪಡಿಸಿದ್ದಾರೆ. ಕಲಬುರಗಿ, ಬೀದರ್ ಭಾಗದ ಕೆಲವೆಡೆಯೂ ಇದೇ ರೀತಿ ಕಂಪನದ ಅನುಭವ ಆಗಿತ್ತು. ಪದೇ ಪದೇ ಭಾರೀ ಸ್ಫೋಟದ ಸದ್ದು ಕೇಳಿದ್ದ ಬಗ್ಗೆ ತಜ್ಞರು ತೆರಳಿ ಅಧ್ಯಯನ ನಡೆಸಿದ್ದರು. ಭೂಕಂಪನ ಅಲ್ಲ ಎನ್ನುವ ವರದಿ ನೀಡಿದ್ದರು. ಆದರೆ, ಈಗ ಚಿಕ್ಕಬಳ್ಳಾಪುರದಲ್ಲಿಯೂ ಭಾರೀ ಮಳೆಯ ಬಳಿಕ ಅದೇ ರೀತಿಯ ಅನುಭವ ಆಗಿರುವುದು ಆತಂಕ ಮೂಡಿಸಿದೆ.
Chikkaballapura district, which is 61 km away from Bengaluru, was hit by two 3.3 magnitude earthquakes on Wednesday morning. The second one happened 5 minutes after the first.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm