ಬ್ರೇಕಿಂಗ್ ನ್ಯೂಸ್
23-12-21 01:36 pm HK Desk news ಕರ್ನಾಟಕ
ಮೈಸೂರು, ಡಿ.23 : ಮೂರು ಮಕ್ಕಳ ತಾಯಿ ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ 17 ವರ್ಷದ ಅಪ್ರಾಪ್ತ ಹುಡುಗನ ಜೊತೆ ಲವ್ವಿಡವ್ವಿ ನಡೆಸಿದ್ದಲ್ಲದೆ, ಆತನನ್ನು ಮದುವೆಯಾಗಲು ದುಂಬಾಲು ಬಿದ್ದ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.
ಹುಡುಗ ಪಿಯುಸಿ ವಿದ್ಯಾರ್ಥಿಯಾಗಿದ್ದು ಆತನನ್ನು ಮದುವೆ ಮಾಡಿಕೊಳ್ಳಲು ಮಹಿಳೆ ಬೆನ್ನುಬಿದ್ದಿದ್ದಾಳೆ. ಘಟನೆ ಬಗ್ಗೆ ಪೋಕ್ಸೋ ಕಾಯ್ದೆಯಡಿ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂವರು ಮಕ್ಕಳನ್ನು ಹೊಂದಿರುವ ಮೂಲತಃ ಕೇರಳದ ವೈನಾಡು ಜಿಲ್ಲೆಯ ಕಲ್ಪೆಟ್ಟ ನಿವಾಸಿ 35 ವರ್ಷದ ಪಲ್ಲವಿ, ಪತಿಯಿಂದ ದೂರವಾಗಿ ಬೆಂಗಳೂರಿನಲ್ಲಿ ವಾಸವಿದ್ದಾಳೆ. ಈ ನಡುವೆ, ಫೇಸ್ಬುಕ್ ಮೂಲಕ ಮೈಸೂರಿನ 17 ವರ್ಷದ ಬಾಲಕನ ಪರಿಚಯವಾಗಿತ್ತು. ಫೇಸ್ಬುಕ್ ಚಾಟಿಂಗ್ ಮೂಲಕ ಸಲುಗೆ ಬೆಳೆದಿದ್ದು ಒಂದು ತಿಂಗಳ ಹಿಂದೆ ಆಕೆಯನ್ನು ಭೇಟಿ ಮಾಡಲೆಂದು ಬಾಲಕ ತೆರಳಿದ್ದ.

ಆನಂತರ ಮನೆಯಿಂದ ನಾಪತ್ತೆಯಾಗಿದ್ದ ಹುಡುಗ 10 ದಿನಗಳ ಕಾಲ ಕೇರಳ, ಆಂಧ್ರಪ್ರದೇಶ ಹಾಗೂ ಬೆಂಗಳೂರಿನಲ್ಲಿ ಸುತ್ತಾಡಿ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದ. ಈತನ್ಮಧ್ಯೆ, ಬಾಲಕನ ಸುಳಿವು ಸಿಗದೇ ಇದ್ದುದರಿಂದ ಪಾಲಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪೊಲೀಸರ ಹುಡುಕಾಟದ ಬಳಿಕ ಹುಡುಗ ಸಿಕ್ಕಿದ್ದು ಮರಳಿ ಮನೆಗೆ ಬಂದಿದ್ದ. ಮಹಿಳೆಗೆ ತಾನೇ ಮದುವೆಯಾಗುವುದಾಗಿ ಹುಡುಗ ಹೇಳಿ ಬಂದಿದ್ದ ಎನ್ನಲಾಗಿತ್ತು.
ಈ ಬಗ್ಗೆ ಯಾವುದೇ ವಿಷಯ ಮನೆಯವರಿಗೆ ತಿಳಿದಿರಲಿಲ್ಲ. ಮನೆಗೆ ಬಂದು ತನ್ನ ಪಾಡಿಗಿದ್ದ ಬಾಲಕನನ್ನು ಸ್ವತಃ ಮಹಿಳೆ ಪಲ್ಲವಿ ಹುಡುಕುತ್ತಾ ಬಂದಿದ್ದಾಳೆ. ಹುಡುಗನಿಂದಲೇ ವಿಳಾಸ ಪಡೆದು ಗ್ರಾಮಕ್ಕೆ ಬಂದಿದ್ದ ಮಹಿಳೆ ಮನೆಯವರಲ್ಲಿ ಹುಡುಗನನ್ನು ಮದುವೆ ಮಾಡಿಕೊಡುವಂತೆ ಕುಟುಂಬದವರನ್ನು ಒತ್ತಾಯಿಸಿದ್ದಾಳೆ. ಇದರಿಂದ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದು ಪೊಲೀಸರಿಗೆ ತಿಳಿಸಿದ್ದಲ್ಲದೆ ಶಿಶು ಅಭಿವೃದ್ಧಿ ಇಲಾಖೆಗೂ ದೂರು ನೀಡಿದ್ದಾರೆ.
ತನಿಖೆ ನಡೆಸಿದ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದಿದ್ದು ಅಪ್ರಾಪ್ತನನ್ನು ಮೈಸೂರಿನ ಬಾಲ ಮಂದಿರದಲ್ಲಿ ಹಾಗೂ ಮಹಿಳೆಯನ್ನು ರಾಜ್ಯ ಮಹಿಳಾ ನಿಲಯದಲ್ಲಿ ಇರಿಸಿದೆ. ಪೊಲೀಸರು ಮಹಿಳೆಯ ವಿರುದ್ಧ ಅಪ್ರಾಪ್ತ ಬಾಲಕನನ್ನು ಲೈಂಗಿಕ ದುರುಪಯೋಗ ಮಾಡಿದ ಕಾರಣಕ್ಕೆ ಪೋಕ್ಸೋ ಕೇಸು ದಾಖಲಿಸಿದ್ದಾರೆ.
35 year old woman seen romancing with PUC boy in Mysuru, woman thrashed by family. A case has been registered against the woman in women police station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm