ಬ್ರೇಕಿಂಗ್ ನ್ಯೂಸ್
23-12-21 01:36 pm HK Desk news ಕರ್ನಾಟಕ
ಮೈಸೂರು, ಡಿ.23 : ಮೂರು ಮಕ್ಕಳ ತಾಯಿ ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ 17 ವರ್ಷದ ಅಪ್ರಾಪ್ತ ಹುಡುಗನ ಜೊತೆ ಲವ್ವಿಡವ್ವಿ ನಡೆಸಿದ್ದಲ್ಲದೆ, ಆತನನ್ನು ಮದುವೆಯಾಗಲು ದುಂಬಾಲು ಬಿದ್ದ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.
ಹುಡುಗ ಪಿಯುಸಿ ವಿದ್ಯಾರ್ಥಿಯಾಗಿದ್ದು ಆತನನ್ನು ಮದುವೆ ಮಾಡಿಕೊಳ್ಳಲು ಮಹಿಳೆ ಬೆನ್ನುಬಿದ್ದಿದ್ದಾಳೆ. ಘಟನೆ ಬಗ್ಗೆ ಪೋಕ್ಸೋ ಕಾಯ್ದೆಯಡಿ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂವರು ಮಕ್ಕಳನ್ನು ಹೊಂದಿರುವ ಮೂಲತಃ ಕೇರಳದ ವೈನಾಡು ಜಿಲ್ಲೆಯ ಕಲ್ಪೆಟ್ಟ ನಿವಾಸಿ 35 ವರ್ಷದ ಪಲ್ಲವಿ, ಪತಿಯಿಂದ ದೂರವಾಗಿ ಬೆಂಗಳೂರಿನಲ್ಲಿ ವಾಸವಿದ್ದಾಳೆ. ಈ ನಡುವೆ, ಫೇಸ್ಬುಕ್ ಮೂಲಕ ಮೈಸೂರಿನ 17 ವರ್ಷದ ಬಾಲಕನ ಪರಿಚಯವಾಗಿತ್ತು. ಫೇಸ್ಬುಕ್ ಚಾಟಿಂಗ್ ಮೂಲಕ ಸಲುಗೆ ಬೆಳೆದಿದ್ದು ಒಂದು ತಿಂಗಳ ಹಿಂದೆ ಆಕೆಯನ್ನು ಭೇಟಿ ಮಾಡಲೆಂದು ಬಾಲಕ ತೆರಳಿದ್ದ.

ಆನಂತರ ಮನೆಯಿಂದ ನಾಪತ್ತೆಯಾಗಿದ್ದ ಹುಡುಗ 10 ದಿನಗಳ ಕಾಲ ಕೇರಳ, ಆಂಧ್ರಪ್ರದೇಶ ಹಾಗೂ ಬೆಂಗಳೂರಿನಲ್ಲಿ ಸುತ್ತಾಡಿ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದ. ಈತನ್ಮಧ್ಯೆ, ಬಾಲಕನ ಸುಳಿವು ಸಿಗದೇ ಇದ್ದುದರಿಂದ ಪಾಲಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪೊಲೀಸರ ಹುಡುಕಾಟದ ಬಳಿಕ ಹುಡುಗ ಸಿಕ್ಕಿದ್ದು ಮರಳಿ ಮನೆಗೆ ಬಂದಿದ್ದ. ಮಹಿಳೆಗೆ ತಾನೇ ಮದುವೆಯಾಗುವುದಾಗಿ ಹುಡುಗ ಹೇಳಿ ಬಂದಿದ್ದ ಎನ್ನಲಾಗಿತ್ತು.
ಈ ಬಗ್ಗೆ ಯಾವುದೇ ವಿಷಯ ಮನೆಯವರಿಗೆ ತಿಳಿದಿರಲಿಲ್ಲ. ಮನೆಗೆ ಬಂದು ತನ್ನ ಪಾಡಿಗಿದ್ದ ಬಾಲಕನನ್ನು ಸ್ವತಃ ಮಹಿಳೆ ಪಲ್ಲವಿ ಹುಡುಕುತ್ತಾ ಬಂದಿದ್ದಾಳೆ. ಹುಡುಗನಿಂದಲೇ ವಿಳಾಸ ಪಡೆದು ಗ್ರಾಮಕ್ಕೆ ಬಂದಿದ್ದ ಮಹಿಳೆ ಮನೆಯವರಲ್ಲಿ ಹುಡುಗನನ್ನು ಮದುವೆ ಮಾಡಿಕೊಡುವಂತೆ ಕುಟುಂಬದವರನ್ನು ಒತ್ತಾಯಿಸಿದ್ದಾಳೆ. ಇದರಿಂದ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದು ಪೊಲೀಸರಿಗೆ ತಿಳಿಸಿದ್ದಲ್ಲದೆ ಶಿಶು ಅಭಿವೃದ್ಧಿ ಇಲಾಖೆಗೂ ದೂರು ನೀಡಿದ್ದಾರೆ.
ತನಿಖೆ ನಡೆಸಿದ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದಿದ್ದು ಅಪ್ರಾಪ್ತನನ್ನು ಮೈಸೂರಿನ ಬಾಲ ಮಂದಿರದಲ್ಲಿ ಹಾಗೂ ಮಹಿಳೆಯನ್ನು ರಾಜ್ಯ ಮಹಿಳಾ ನಿಲಯದಲ್ಲಿ ಇರಿಸಿದೆ. ಪೊಲೀಸರು ಮಹಿಳೆಯ ವಿರುದ್ಧ ಅಪ್ರಾಪ್ತ ಬಾಲಕನನ್ನು ಲೈಂಗಿಕ ದುರುಪಯೋಗ ಮಾಡಿದ ಕಾರಣಕ್ಕೆ ಪೋಕ್ಸೋ ಕೇಸು ದಾಖಲಿಸಿದ್ದಾರೆ.
35 year old woman seen romancing with PUC boy in Mysuru, woman thrashed by family. A case has been registered against the woman in women police station.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm