ಬ್ರೇಕಿಂಗ್ ನ್ಯೂಸ್
23-12-21 02:55 pm HK Desk news ಕರ್ನಾಟಕ
ಬೆಂಗಳೂರು, ಡಿ.23 : ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ನಡೆಸುವ ಆರೋಪದ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಣಪತಿ ಕಟ್ಟೆ ರಸ್ತೆಯ ಎಸ್ತೆಲಾ ಲೂಯಿಸ್ ಎಂಬವರು ತಮ್ಮ ಮನೆಯಲ್ಲಿ ಹಮ್ಮಿಕೊಂಡಿರುವ ಕ್ರಿಸ್ಮಸ್ ಪ್ರಾರ್ಥನೆಗೆ ಹೈಕೋರ್ಟ್ ಮೆಟ್ಟಿಲೇರಿ ಅನುಮತಿ ಪಡೆದಿದ್ದಾರೆ.
ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಎಸ್ತೆಲಾ ಅವರಿಗೆ ಜಾರಿಗೊಳಿಸಿದ್ದ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು ಷರತ್ತು ಬದ್ಧ ಅನುಮತಿ ನೀಡಿದೆ.
ವಿಚಾರಣೆ ವೇಳೆ, ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸರ್ಕಾರಿ ವಕೀಲ ವಿನೋದ್ ಕುಮಾರ್, ‘ಅರ್ಜಿದಾರರು ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಅನ್ಯ ಧರ್ಮದವರನ್ನು ಕ್ರೈಸ್ತ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆ ಕಾರಣಕ್ಕಾಗಿಯೇ ಪೊಲೀಸರು ನೋಟಿಸ್ ನೀಡಿದ್ದಾರೆ. ಆದ್ದರಿಂದ, ಅರ್ಜಿದಾರರ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆಗೆ ಅನುಮತಿ ನೀಡಬಾರದು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರ ಪರ ವಕೀಲರು, ‘ಎಸ್ತೆಲಾ ಮನೆಯಲ್ಲಿ ಕ್ರಿಸ್ಮಸ್ ಪಾರ್ಥನೆ ವೇಳೆ ಮತಾಂತರ ಚಟುವಟಿಕೆ ನಡೆಯುವುದಿಲ್ಲ. ಈ ಬಗ್ಗೆ ಯಾರು ಕೂಡ ಸಂಶಯ ಪಡುವುದು ಬೇಡ. ಅಲ್ಲಿ ಕೇವಲ ಕ್ರಿಸ್ಮಸ್ ಪ್ರಾರ್ಥನೆ ಅಷ್ಟೇ ನಡೆಯಲಿದೆ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು ತಮ್ಮ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ಮಾಡಬಹುದು. ಈ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ತೊಂದರೆ ಉಂಟು ಮಾಡಬಾರದು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಬಾರದು’ ಎಂದು ಷರತ್ತು ವಿಧಿಸಿ ಅನುಮತಿ ನೀಡಿತು. ‘ಪ್ರಾರ್ಥನೆ ಸಂದರ್ಭದಲ್ಲಿ ಪೊಲೀಸರು ಮನೆಯ ಮೇಲೆ ನಿಗಾ ವಹಿಸವುದಕ್ಕೂ ಅವಕಾಶ ಇದೆ’ ಎಂದೂ ನ್ಯಾಯಪೀಠ ಹೇಳಿದೆ.
Kundapura Alleged of Coversion in the name of Christmas Prayer, woman gets order to conduct prayers at home from High court.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm