ಬ್ರೇಕಿಂಗ್ ನ್ಯೂಸ್
23-12-21 02:55 pm HK Desk news ಕರ್ನಾಟಕ
ಬೆಂಗಳೂರು, ಡಿ.23 : ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ನಡೆಸುವ ಆರೋಪದ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಣಪತಿ ಕಟ್ಟೆ ರಸ್ತೆಯ ಎಸ್ತೆಲಾ ಲೂಯಿಸ್ ಎಂಬವರು ತಮ್ಮ ಮನೆಯಲ್ಲಿ ಹಮ್ಮಿಕೊಂಡಿರುವ ಕ್ರಿಸ್ಮಸ್ ಪ್ರಾರ್ಥನೆಗೆ ಹೈಕೋರ್ಟ್ ಮೆಟ್ಟಿಲೇರಿ ಅನುಮತಿ ಪಡೆದಿದ್ದಾರೆ.
ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಎಸ್ತೆಲಾ ಅವರಿಗೆ ಜಾರಿಗೊಳಿಸಿದ್ದ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು ಷರತ್ತು ಬದ್ಧ ಅನುಮತಿ ನೀಡಿದೆ.
ವಿಚಾರಣೆ ವೇಳೆ, ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸರ್ಕಾರಿ ವಕೀಲ ವಿನೋದ್ ಕುಮಾರ್, ‘ಅರ್ಜಿದಾರರು ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಅನ್ಯ ಧರ್ಮದವರನ್ನು ಕ್ರೈಸ್ತ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆ ಕಾರಣಕ್ಕಾಗಿಯೇ ಪೊಲೀಸರು ನೋಟಿಸ್ ನೀಡಿದ್ದಾರೆ. ಆದ್ದರಿಂದ, ಅರ್ಜಿದಾರರ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆಗೆ ಅನುಮತಿ ನೀಡಬಾರದು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರ ಪರ ವಕೀಲರು, ‘ಎಸ್ತೆಲಾ ಮನೆಯಲ್ಲಿ ಕ್ರಿಸ್ಮಸ್ ಪಾರ್ಥನೆ ವೇಳೆ ಮತಾಂತರ ಚಟುವಟಿಕೆ ನಡೆಯುವುದಿಲ್ಲ. ಈ ಬಗ್ಗೆ ಯಾರು ಕೂಡ ಸಂಶಯ ಪಡುವುದು ಬೇಡ. ಅಲ್ಲಿ ಕೇವಲ ಕ್ರಿಸ್ಮಸ್ ಪ್ರಾರ್ಥನೆ ಅಷ್ಟೇ ನಡೆಯಲಿದೆ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು ತಮ್ಮ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ಮಾಡಬಹುದು. ಈ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ತೊಂದರೆ ಉಂಟು ಮಾಡಬಾರದು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಬಾರದು’ ಎಂದು ಷರತ್ತು ವಿಧಿಸಿ ಅನುಮತಿ ನೀಡಿತು. ‘ಪ್ರಾರ್ಥನೆ ಸಂದರ್ಭದಲ್ಲಿ ಪೊಲೀಸರು ಮನೆಯ ಮೇಲೆ ನಿಗಾ ವಹಿಸವುದಕ್ಕೂ ಅವಕಾಶ ಇದೆ’ ಎಂದೂ ನ್ಯಾಯಪೀಠ ಹೇಳಿದೆ.
Kundapura Alleged of Coversion in the name of Christmas Prayer, woman gets order to conduct prayers at home from High court.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am