ಬ್ರೇಕಿಂಗ್ ನ್ಯೂಸ್
23-12-21 02:55 pm HK Desk news ಕರ್ನಾಟಕ
ಬೆಂಗಳೂರು, ಡಿ.23 : ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ನಡೆಸುವ ಆರೋಪದ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗಣಪತಿ ಕಟ್ಟೆ ರಸ್ತೆಯ ಎಸ್ತೆಲಾ ಲೂಯಿಸ್ ಎಂಬವರು ತಮ್ಮ ಮನೆಯಲ್ಲಿ ಹಮ್ಮಿಕೊಂಡಿರುವ ಕ್ರಿಸ್ಮಸ್ ಪ್ರಾರ್ಥನೆಗೆ ಹೈಕೋರ್ಟ್ ಮೆಟ್ಟಿಲೇರಿ ಅನುಮತಿ ಪಡೆದಿದ್ದಾರೆ.
ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಮತಾಂತರ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಎಸ್ತೆಲಾ ಅವರಿಗೆ ಜಾರಿಗೊಳಿಸಿದ್ದ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು ಷರತ್ತು ಬದ್ಧ ಅನುಮತಿ ನೀಡಿದೆ.
ವಿಚಾರಣೆ ವೇಳೆ, ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸರ್ಕಾರಿ ವಕೀಲ ವಿನೋದ್ ಕುಮಾರ್, ‘ಅರ್ಜಿದಾರರು ಕ್ರಿಸ್ಮಸ್ ಪ್ರಾರ್ಥನೆ ಹೆಸರಿನಲ್ಲಿ ಅನ್ಯ ಧರ್ಮದವರನ್ನು ಕ್ರೈಸ್ತ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆ ಕಾರಣಕ್ಕಾಗಿಯೇ ಪೊಲೀಸರು ನೋಟಿಸ್ ನೀಡಿದ್ದಾರೆ. ಆದ್ದರಿಂದ, ಅರ್ಜಿದಾರರ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆಗೆ ಅನುಮತಿ ನೀಡಬಾರದು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರ ಪರ ವಕೀಲರು, ‘ಎಸ್ತೆಲಾ ಮನೆಯಲ್ಲಿ ಕ್ರಿಸ್ಮಸ್ ಪಾರ್ಥನೆ ವೇಳೆ ಮತಾಂತರ ಚಟುವಟಿಕೆ ನಡೆಯುವುದಿಲ್ಲ. ಈ ಬಗ್ಗೆ ಯಾರು ಕೂಡ ಸಂಶಯ ಪಡುವುದು ಬೇಡ. ಅಲ್ಲಿ ಕೇವಲ ಕ್ರಿಸ್ಮಸ್ ಪ್ರಾರ್ಥನೆ ಅಷ್ಟೇ ನಡೆಯಲಿದೆ ಎಂದು ನ್ಯಾಯಪೀಠಕ್ಕೆ ಭರವಸೆ ನೀಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರು ತಮ್ಮ ಮನೆಯಲ್ಲಿ ಕ್ರಿಸ್ಮಸ್ ಪ್ರಾರ್ಥನೆ ಮಾಡಬಹುದು. ಈ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ತೊಂದರೆ ಉಂಟು ಮಾಡಬಾರದು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಬಾರದು’ ಎಂದು ಷರತ್ತು ವಿಧಿಸಿ ಅನುಮತಿ ನೀಡಿತು. ‘ಪ್ರಾರ್ಥನೆ ಸಂದರ್ಭದಲ್ಲಿ ಪೊಲೀಸರು ಮನೆಯ ಮೇಲೆ ನಿಗಾ ವಹಿಸವುದಕ್ಕೂ ಅವಕಾಶ ಇದೆ’ ಎಂದೂ ನ್ಯಾಯಪೀಠ ಹೇಳಿದೆ.
Kundapura Alleged of Coversion in the name of Christmas Prayer, woman gets order to conduct prayers at home from High court.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm