ಬ್ರೇಕಿಂಗ್ ನ್ಯೂಸ್
23-12-21 09:30 pm HK Desk news ಕರ್ನಾಟಕ
ಬೆಂಗಳೂರು, ಡಿ.23 : ವಿಪಕ್ಷಗಳ ಗದ್ದಲ, ಧರಣಿಯ ನಡುವೆಯೇ ರಾಜ್ಯ ಬಿಜೆಪಿ ಸರಕಾರ ಮತಾಂತರ ತಡೆಯುವ ಉದ್ದೇಶದ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ವಿಧೇಯಕವನ್ನು ಧ್ವನಿ ಮತದಿಂದ ವಿಧಾನಸಭೆಯಲ್ಲಿ ಅಂಗೀಕರಿಸಿದೆ.
ಎರಡು ದಿನಗಳ ಕಾಲ ಅಧಿವೇಶನದಲ್ಲಿ ತೀವ್ರ ಚರ್ಚೆ ನಡೆದ ಬಳಿಕ ಗುರುವಾರ ಸಂಜೆ ಮಸೂದೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮತಕ್ಕೆ ಹಾಕಿದರು. ಆದರೆ ಮಸೂದೆಯನ್ನು ಮತಕ್ಕೆ ಹಾಕುವುದನ್ನು ವಿರೋಧಿಸಿ ವಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ತೀವ್ರ ಗದ್ದಲ ಎಬ್ಬಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದಂತೆಯೇ ಸ್ವೀಕರ್, ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ಸದನದಲ್ಲಿ ಹೆಚ್ಚು ಬಿಜೆಪಿ ಸದಸ್ಯರು ಇರುವುದರಿಂದ ಧ್ವನಿ ಮತದಿಂದ ಮಸೂದೆ ವಿಧಾನಸಭೆಯ ಅಂಕಿತ ಪಡೆದಿದೆ.
ವಿಪಕ್ಷಗಳ ವಿರೋಧ ಮಧ್ಯೆಯೇ ಸದನವು ಮಸೂದೆಯನ್ನು ಅಂಗೀಕರಿಸಿದ್ದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕಟುವಾಗಿ ವಿರೋಧಿಸಿದ್ದಾರೆ. ಬಿಜೆಪಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ತೋರಿಸಿದೆ ಎಂದು ಕಿಡಿಕಾರಿದ್ದಾರೆ. ಮಸೂದೆ ಇನ್ನು ವಿಧಾನ ಪರಿಷತ್ತಿನ ಅಂಗೀಕಾರ ಪಡೆಯಬೇಕಿದೆ. ಪರಿಷತ್ತಿನಲ್ಲಿ ಶುಕ್ರವಾರ ಈ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.

ಕಾಂಗ್ರೆಸ್ ಗದ್ದಲ, ವಿರೋಧ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಾವು ಹಿಂದುಳಿದ ವರ್ಗ, ಎಸ್ಸಿ – ಎಸ್ಟಿ ಸಮುದಾಯದ ಜನರ ಹಿತವನ್ನು ಕಾಯುವುದಕ್ಕಾಗಿ ಈ ಮಸೂದೆ ತಂದಿದ್ದೇವೆ. ಆದರೆ, ಕಾಂಗ್ರೆಸ್ ಇದನ್ನು ವಿರೋಧಿಸುತ್ತಿದ್ದು, ಅವರು ಎಸ್ಸಿ- ಎಸ್ಟಿ ಸಮುದಾಯಗಳ ವಿರೋಧಿಯಾಗಿ ನಡೆದುಕೊಂಡಿದೆ. ಬಲವಂತದ ಮತಾಂತರ ಪಿಡುಗಿನಿಂದ ಅತಿ ಹೆಚ್ಚು ಬಾಧಿತರಾದವರು ದಲಿತರು ಎಂದು ಹೇಳಿದರು.
ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಆಗಿರುವುದಕ್ಕಾಗಿ ಬಿಜೆಪಿ ಶಾಸಕರನ್ನು ಮಾಜಿ ಸಿಎಂ ಯಡಿಯೂರಪ್ಪ ಅಭಿನಂದಿಸಿದ್ದಾರೆ. ವಂಚನೆಯ, ಬಲವಂತದ, ಆಮಿಷದ ಮತಾಂತರ ಎನ್ನುವ ಪಿಡುಗನ್ನು ಕಿತ್ತೊಗೆಯಬೇಕು ಅನ್ನುವುದು ಪಕ್ಷದ ಬದ್ಧತೆ. ಈ ನಿಟ್ಟಿನಲ್ಲಿ ವಿಧೇಯಕದ ಅನುಮೋದನೆ ಚರಿತ್ರಾರ್ಹವಾಗಿದೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Despite not getting support from the opposition in the Assembly and from several quarters in the society, the ruling BJP government in Karnataka passed the Protection of Right to Freedom of Religion Bill, 2021, commonly referred to as Anti-Conversion Bill, on Thursday by voice vote in the state legislative assembly. The bill will still need to be approved by the Legislative Council, where BJP doesn't have a majority.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm