ಬ್ರೇಕಿಂಗ್ ನ್ಯೂಸ್
15-09-20 02:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 15: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಮತ್ತಷ್ಟು ನಿಗೂಢವಾಗುವತ್ತ ಸಾಗಿದೆ. ಸಿನಿತಾರೆ ರಾಗಿಣಿಯನ್ನು ಜೈಲು ಪಾಲು ಮಾಡಿರುವ ಸಿಸಿಬಿ ಪೊಲೀಸರು ಈಗ ಸ್ಟಾರ್ ದಂಪತಿಯತ್ತ ಕಣ್ಣು ಹಾಕಿದ್ದಾರೆ. ಗುಳಿಕೆನ್ನೆ ದಿಗಂತ್ ಮತ್ತು ಐಂದ್ರಿತಾ ರೇಗೆ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಕನ್ನಡ ಸಿನಿಮಾ ಲೋಕದಲ್ಲಿ ಡ್ರಗ್ಸ್ ಸದ್ದು ಮಾಡಿರುವಾಗಲೇ ನಟಿ ಐಂದ್ರಿತಾ ರೇ ಕೂಡ, ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದರು ಎನ್ನೋದು ಬಹಿರಂಗ ಆಗಿತ್ತು. ಅಲ್ಲದೆ, ಐಂದ್ರಿತಾ ರೇಗೆ ಸಂಬಂಧಿಸಿದ ವಿಡಿಯೋ, ಫೋಟೋ ವೈರಲ್ ಆಗಿತ್ತು. ಪ್ರಕರಣದ ಪ್ರಮುಖ ಆರೋಪಿ ಶೇಕ್ ಫಾಝಿಲ್ ಜೊತೆ ಗುರುತಿಸಿಕೊಂಡಿದ್ದ ಫೋಟೋಗಳು ಬಹಿರಂಗ ಆಗಿದ್ದು ಬಂಗಾಳಿ ಹುಡುಗಿ ಐಂದ್ರಿತಾ ನಿದ್ದೆಗೆಡಿಸಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ರೇ, ಸಿನಿಮಾ ಪ್ರಮೋಶನ್ ಕೆಲಸಕ್ಕಾಗಿ ಕೊಲಂಬೋದ ಕ್ಯಾಸಿನೋಗೆ ಹೋಗಿದ್ದು ಹೌದು. ಚಿತ್ರದ ಪ್ರಚಾರಕ್ಕಾಗಿ ಮ್ಯಾನೇಜರ್ ಸೂಚನೆಯಂತೆ ಹೋಗಿದ್ದೆ. ಅಲ್ಲಿ ಸೊಹೈಲ್ ಮತ್ತು ಅರ್ಬಾಜ್ ಖಾನ್ ಪರಿಚಯ ಆಗಿತ್ತು. ಅದು ಬಿಟ್ಟರೆ ಶೇಖ್ ಫಾಝಿಲ್ ಬಗ್ಗೆ ನನಗೇನು ಯಾವುದೇ ಪರಿಚಯವಿಲ್ಲ ಎಂದಿದ್ದರು.
ಅರ್ಬಾಜ್ ಖಾನ್ ಜೊತೆ ‘ಮೇ ಜರೂರ್ ಆವೂಂಗಾ’ ಸಿನಿಮಾ ಸಂದರ್ಭದಲ್ಲಿ ಕೊಲಂಬೋಗೆ ಹೋಗಿದ್ದೇನೆ. ಕ್ಯಾಸಿನೋ ಪಾರ್ಟಿಗೆ ತೆರಳಿರುವ ಫೋಟೋಗಳು ಇನ್ಸ್ಟಾಗ್ರಾಂನಲ್ಲಿದ್ದು ಯಾವುದನ್ನೂ ಡಿಲೀಟ್ ಮಾಡಿಲ್ಲ. ಕ್ಯಾಸಿನೋಗೆ ಹೋಗಿದ್ದಲ್ಲದೆ, ಎರಡು ಬಾರಿ ಸ್ಟೆಪ್ ಹಾಕಿ ಬಂದಿದ್ದೇನೆ. ಕರೀಷ್ಮಾ ಕಪೂರ್, ಸೊಹೈಲ್ ಖಾನ್, ಅರ್ಬಾಜ್ ಖಾನ್, ನನ್ನ ಜೊತೆ ಬಂದಿದ್ದರು ಎಂದು ವಿವರಿಸಿದ್ದರು. ಎರಡನೇ ಬಾರಿ ಅರ್ಬಾಜ್ ಖಾನ್ ಹುಟ್ಟುಹಬ್ಬಕ್ಕೆಂದು ಬೆಂಗಳೂರಿನಲ್ಲಿ ಪಾರ್ಟಿ ಮಾಡಲಾಗಿತ್ತು. ಪಾರ್ಟಿ ವೇಳೆ ಫಾಝಿಲ್ ಬಂದಿದ್ದ. ಪಾರ್ಟಿಯಲ್ಲಿದ್ದಾಗ ಫಾಝಿಲ್ ಜೊತೆ ಫೋಟೋ ತೆಗೆಸಲಾಗಿತ್ತು. ಎರಡು ಬಾರಿಯೂ ಅರ್ಬಾಜ್ ಮೂಲಕವೇ ಫಾಝಿಲ್ ಭೇಟಿಯಾಗಿದ್ದೆ. ಆಗ ಯಾರಿಗೂ ಫಾಝಿಲ್ ಬಗ್ಗೆ ನಮಗೂ ಗೊತ್ತಿರಲಿಲ್ಲ ಎಂದು ತಿಳಿಸಿದರು.
ಶ್ರೀಲಂಕಾದ ಕ್ಯಾಸಿನೋಗೆ ಸಿನಿಮಾದ ತಾರೆಯರನ್ನ ಕರೆಸುತ್ತಾರೆ. ನಮಗೂ ಆಹ್ವಾನ ಬಂದಾಗ ವ್ಯಕ್ತಿಯ ಹಿನ್ನೆಲೆ ಚೆಕ್ ಮಾಡಲು ಆಗಲ್ಲ. ಪಾರ್ಟಿಗಳಲ್ಲಿ ಫೋಟೋ ತೆಗೆದುಕೊಂಡವರು ತಪ್ಪು ಮಾಡಿದ್ರೆ ನಮ್ಮನ್ನ ಪ್ರಶ್ನೆ ಮಾಡಿದ್ರೆ ಹೇಗೆ ಎಂದು ಐಂದ್ರಿತಾ ಪ್ರಶ್ನಿಸಿದ್ದರು.
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 09:10 pm
HK News Desk
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
10-04-25 09:48 pm
Mangalore Correspondent
Mangalore Accident, Padil: ಪಡೀಲ್ ; ಚಾಲಕನ ನಿಯಂ...
09-04-25 10:57 pm
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm