ಬ್ರೇಕಿಂಗ್ ನ್ಯೂಸ್
15-09-20 02:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 15: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಮತ್ತಷ್ಟು ನಿಗೂಢವಾಗುವತ್ತ ಸಾಗಿದೆ. ಸಿನಿತಾರೆ ರಾಗಿಣಿಯನ್ನು ಜೈಲು ಪಾಲು ಮಾಡಿರುವ ಸಿಸಿಬಿ ಪೊಲೀಸರು ಈಗ ಸ್ಟಾರ್ ದಂಪತಿಯತ್ತ ಕಣ್ಣು ಹಾಕಿದ್ದಾರೆ. ಗುಳಿಕೆನ್ನೆ ದಿಗಂತ್ ಮತ್ತು ಐಂದ್ರಿತಾ ರೇಗೆ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಕನ್ನಡ ಸಿನಿಮಾ ಲೋಕದಲ್ಲಿ ಡ್ರಗ್ಸ್ ಸದ್ದು ಮಾಡಿರುವಾಗಲೇ ನಟಿ ಐಂದ್ರಿತಾ ರೇ ಕೂಡ, ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದರು ಎನ್ನೋದು ಬಹಿರಂಗ ಆಗಿತ್ತು. ಅಲ್ಲದೆ, ಐಂದ್ರಿತಾ ರೇಗೆ ಸಂಬಂಧಿಸಿದ ವಿಡಿಯೋ, ಫೋಟೋ ವೈರಲ್ ಆಗಿತ್ತು. ಪ್ರಕರಣದ ಪ್ರಮುಖ ಆರೋಪಿ ಶೇಕ್ ಫಾಝಿಲ್ ಜೊತೆ ಗುರುತಿಸಿಕೊಂಡಿದ್ದ ಫೋಟೋಗಳು ಬಹಿರಂಗ ಆಗಿದ್ದು ಬಂಗಾಳಿ ಹುಡುಗಿ ಐಂದ್ರಿತಾ ನಿದ್ದೆಗೆಡಿಸಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ರೇ, ಸಿನಿಮಾ ಪ್ರಮೋಶನ್ ಕೆಲಸಕ್ಕಾಗಿ ಕೊಲಂಬೋದ ಕ್ಯಾಸಿನೋಗೆ ಹೋಗಿದ್ದು ಹೌದು. ಚಿತ್ರದ ಪ್ರಚಾರಕ್ಕಾಗಿ ಮ್ಯಾನೇಜರ್ ಸೂಚನೆಯಂತೆ ಹೋಗಿದ್ದೆ. ಅಲ್ಲಿ ಸೊಹೈಲ್ ಮತ್ತು ಅರ್ಬಾಜ್ ಖಾನ್ ಪರಿಚಯ ಆಗಿತ್ತು. ಅದು ಬಿಟ್ಟರೆ ಶೇಖ್ ಫಾಝಿಲ್ ಬಗ್ಗೆ ನನಗೇನು ಯಾವುದೇ ಪರಿಚಯವಿಲ್ಲ ಎಂದಿದ್ದರು.
ಅರ್ಬಾಜ್ ಖಾನ್ ಜೊತೆ ‘ಮೇ ಜರೂರ್ ಆವೂಂಗಾ’ ಸಿನಿಮಾ ಸಂದರ್ಭದಲ್ಲಿ ಕೊಲಂಬೋಗೆ ಹೋಗಿದ್ದೇನೆ. ಕ್ಯಾಸಿನೋ ಪಾರ್ಟಿಗೆ ತೆರಳಿರುವ ಫೋಟೋಗಳು ಇನ್ಸ್ಟಾಗ್ರಾಂನಲ್ಲಿದ್ದು ಯಾವುದನ್ನೂ ಡಿಲೀಟ್ ಮಾಡಿಲ್ಲ. ಕ್ಯಾಸಿನೋಗೆ ಹೋಗಿದ್ದಲ್ಲದೆ, ಎರಡು ಬಾರಿ ಸ್ಟೆಪ್ ಹಾಕಿ ಬಂದಿದ್ದೇನೆ. ಕರೀಷ್ಮಾ ಕಪೂರ್, ಸೊಹೈಲ್ ಖಾನ್, ಅರ್ಬಾಜ್ ಖಾನ್, ನನ್ನ ಜೊತೆ ಬಂದಿದ್ದರು ಎಂದು ವಿವರಿಸಿದ್ದರು. ಎರಡನೇ ಬಾರಿ ಅರ್ಬಾಜ್ ಖಾನ್ ಹುಟ್ಟುಹಬ್ಬಕ್ಕೆಂದು ಬೆಂಗಳೂರಿನಲ್ಲಿ ಪಾರ್ಟಿ ಮಾಡಲಾಗಿತ್ತು. ಪಾರ್ಟಿ ವೇಳೆ ಫಾಝಿಲ್ ಬಂದಿದ್ದ. ಪಾರ್ಟಿಯಲ್ಲಿದ್ದಾಗ ಫಾಝಿಲ್ ಜೊತೆ ಫೋಟೋ ತೆಗೆಸಲಾಗಿತ್ತು. ಎರಡು ಬಾರಿಯೂ ಅರ್ಬಾಜ್ ಮೂಲಕವೇ ಫಾಝಿಲ್ ಭೇಟಿಯಾಗಿದ್ದೆ. ಆಗ ಯಾರಿಗೂ ಫಾಝಿಲ್ ಬಗ್ಗೆ ನಮಗೂ ಗೊತ್ತಿರಲಿಲ್ಲ ಎಂದು ತಿಳಿಸಿದರು.
ಶ್ರೀಲಂಕಾದ ಕ್ಯಾಸಿನೋಗೆ ಸಿನಿಮಾದ ತಾರೆಯರನ್ನ ಕರೆಸುತ್ತಾರೆ. ನಮಗೂ ಆಹ್ವಾನ ಬಂದಾಗ ವ್ಯಕ್ತಿಯ ಹಿನ್ನೆಲೆ ಚೆಕ್ ಮಾಡಲು ಆಗಲ್ಲ. ಪಾರ್ಟಿಗಳಲ್ಲಿ ಫೋಟೋ ತೆಗೆದುಕೊಂಡವರು ತಪ್ಪು ಮಾಡಿದ್ರೆ ನಮ್ಮನ್ನ ಪ್ರಶ್ನೆ ಮಾಡಿದ್ರೆ ಹೇಗೆ ಎಂದು ಐಂದ್ರಿತಾ ಪ್ರಶ್ನಿಸಿದ್ದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm