ಬ್ರೇಕಿಂಗ್ ನ್ಯೂಸ್
15-09-20 02:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 15: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಮತ್ತಷ್ಟು ನಿಗೂಢವಾಗುವತ್ತ ಸಾಗಿದೆ. ಸಿನಿತಾರೆ ರಾಗಿಣಿಯನ್ನು ಜೈಲು ಪಾಲು ಮಾಡಿರುವ ಸಿಸಿಬಿ ಪೊಲೀಸರು ಈಗ ಸ್ಟಾರ್ ದಂಪತಿಯತ್ತ ಕಣ್ಣು ಹಾಕಿದ್ದಾರೆ. ಗುಳಿಕೆನ್ನೆ ದಿಗಂತ್ ಮತ್ತು ಐಂದ್ರಿತಾ ರೇಗೆ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿಸಿಬಿ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಕನ್ನಡ ಸಿನಿಮಾ ಲೋಕದಲ್ಲಿ ಡ್ರಗ್ಸ್ ಸದ್ದು ಮಾಡಿರುವಾಗಲೇ ನಟಿ ಐಂದ್ರಿತಾ ರೇ ಕೂಡ, ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದರು ಎನ್ನೋದು ಬಹಿರಂಗ ಆಗಿತ್ತು. ಅಲ್ಲದೆ, ಐಂದ್ರಿತಾ ರೇಗೆ ಸಂಬಂಧಿಸಿದ ವಿಡಿಯೋ, ಫೋಟೋ ವೈರಲ್ ಆಗಿತ್ತು. ಪ್ರಕರಣದ ಪ್ರಮುಖ ಆರೋಪಿ ಶೇಕ್ ಫಾಝಿಲ್ ಜೊತೆ ಗುರುತಿಸಿಕೊಂಡಿದ್ದ ಫೋಟೋಗಳು ಬಹಿರಂಗ ಆಗಿದ್ದು ಬಂಗಾಳಿ ಹುಡುಗಿ ಐಂದ್ರಿತಾ ನಿದ್ದೆಗೆಡಿಸಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ರೇ, ಸಿನಿಮಾ ಪ್ರಮೋಶನ್ ಕೆಲಸಕ್ಕಾಗಿ ಕೊಲಂಬೋದ ಕ್ಯಾಸಿನೋಗೆ ಹೋಗಿದ್ದು ಹೌದು. ಚಿತ್ರದ ಪ್ರಚಾರಕ್ಕಾಗಿ ಮ್ಯಾನೇಜರ್ ಸೂಚನೆಯಂತೆ ಹೋಗಿದ್ದೆ. ಅಲ್ಲಿ ಸೊಹೈಲ್ ಮತ್ತು ಅರ್ಬಾಜ್ ಖಾನ್ ಪರಿಚಯ ಆಗಿತ್ತು. ಅದು ಬಿಟ್ಟರೆ ಶೇಖ್ ಫಾಝಿಲ್ ಬಗ್ಗೆ ನನಗೇನು ಯಾವುದೇ ಪರಿಚಯವಿಲ್ಲ ಎಂದಿದ್ದರು.
ಅರ್ಬಾಜ್ ಖಾನ್ ಜೊತೆ ‘ಮೇ ಜರೂರ್ ಆವೂಂಗಾ’ ಸಿನಿಮಾ ಸಂದರ್ಭದಲ್ಲಿ ಕೊಲಂಬೋಗೆ ಹೋಗಿದ್ದೇನೆ. ಕ್ಯಾಸಿನೋ ಪಾರ್ಟಿಗೆ ತೆರಳಿರುವ ಫೋಟೋಗಳು ಇನ್ಸ್ಟಾಗ್ರಾಂನಲ್ಲಿದ್ದು ಯಾವುದನ್ನೂ ಡಿಲೀಟ್ ಮಾಡಿಲ್ಲ. ಕ್ಯಾಸಿನೋಗೆ ಹೋಗಿದ್ದಲ್ಲದೆ, ಎರಡು ಬಾರಿ ಸ್ಟೆಪ್ ಹಾಕಿ ಬಂದಿದ್ದೇನೆ. ಕರೀಷ್ಮಾ ಕಪೂರ್, ಸೊಹೈಲ್ ಖಾನ್, ಅರ್ಬಾಜ್ ಖಾನ್, ನನ್ನ ಜೊತೆ ಬಂದಿದ್ದರು ಎಂದು ವಿವರಿಸಿದ್ದರು. ಎರಡನೇ ಬಾರಿ ಅರ್ಬಾಜ್ ಖಾನ್ ಹುಟ್ಟುಹಬ್ಬಕ್ಕೆಂದು ಬೆಂಗಳೂರಿನಲ್ಲಿ ಪಾರ್ಟಿ ಮಾಡಲಾಗಿತ್ತು. ಪಾರ್ಟಿ ವೇಳೆ ಫಾಝಿಲ್ ಬಂದಿದ್ದ. ಪಾರ್ಟಿಯಲ್ಲಿದ್ದಾಗ ಫಾಝಿಲ್ ಜೊತೆ ಫೋಟೋ ತೆಗೆಸಲಾಗಿತ್ತು. ಎರಡು ಬಾರಿಯೂ ಅರ್ಬಾಜ್ ಮೂಲಕವೇ ಫಾಝಿಲ್ ಭೇಟಿಯಾಗಿದ್ದೆ. ಆಗ ಯಾರಿಗೂ ಫಾಝಿಲ್ ಬಗ್ಗೆ ನಮಗೂ ಗೊತ್ತಿರಲಿಲ್ಲ ಎಂದು ತಿಳಿಸಿದರು.
ಶ್ರೀಲಂಕಾದ ಕ್ಯಾಸಿನೋಗೆ ಸಿನಿಮಾದ ತಾರೆಯರನ್ನ ಕರೆಸುತ್ತಾರೆ. ನಮಗೂ ಆಹ್ವಾನ ಬಂದಾಗ ವ್ಯಕ್ತಿಯ ಹಿನ್ನೆಲೆ ಚೆಕ್ ಮಾಡಲು ಆಗಲ್ಲ. ಪಾರ್ಟಿಗಳಲ್ಲಿ ಫೋಟೋ ತೆಗೆದುಕೊಂಡವರು ತಪ್ಪು ಮಾಡಿದ್ರೆ ನಮ್ಮನ್ನ ಪ್ರಶ್ನೆ ಮಾಡಿದ್ರೆ ಹೇಗೆ ಎಂದು ಐಂದ್ರಿತಾ ಪ್ರಶ್ನಿಸಿದ್ದರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm