ಬ್ರೇಕಿಂಗ್ ನ್ಯೂಸ್
25-12-21 02:11 pm HK Desk news ಕರ್ನಾಟಕ
ಮೈಸೂರು, ಡಿ.25 : ನಾವು ಯಾವಾಗಲೂ ಕನ್ನಡದ ಪರ. ಭಾಷೆ ಹೆಸರಿನ ಹೋರಾಟ ಉತ್ತಮ ರೀತಿಯಲ್ಲಿ ನಡೆಯಬೇಕು. ಆದರೆ ಏಕಾಏಕಿ ಡಿ.31 ಕ್ಕೆ ರಾಜ್ಯ ಬಂದ್ ಗೆ ಕರೆ ನೀಡಿರೋದು ಬೇಸರ ತರಿಸಿದೆ. ಅಂದು ಕನ್ನಡದ ಮೂರು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಂದ್ ಕರೆ ನೀಡಿರೋದು ಕನ್ನಡಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ನಟ ಶಿವರಾಜ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ , ಕನ್ನಡದ ವಿಚಾರದಲ್ಲಿ ಸರ್ಕಾರ ಉತ್ತಮವಾಗಿ ಸ್ಪಂದನೆ ಮಾಡುತ್ತಿದೆ. ಯಾವುದೇ ಇಷ್ಯೂ ಇದ್ದಾಗ ಅದನ್ನ ಬುದ್ದಿವಂತಿಕೆಯಿಂದ ಬಗೆ ಹರಿಸಬೇಕು. ಯಾರೋ ಹೇಳಿದರು ಅಂತ ರಾಜ್ಯ ಬಂದ್ ಮಾಡೋದು ಸರಿಯಲ್ಲ ಎಂದರು.
ಕನ್ನಡ ಪರ ಹೋರಾಟಕ್ಕೆ ನಾವು ಕಲಾವಿದರು, ಚಿತ್ರರಂಗ ಯಾವತ್ತೂ ಕೈಜೋಡಿಸುತ್ತೇವೆ. ನಮ್ಮದು ಕನ್ನಡ ಭಾಷೆ. ಅದಕ್ಕೆ ಅವಮಾನವಾದರೆ ನಮಗೆ ಅವಮಾನವಾದಂತೆ. ಈ ಬಗ್ಗೆ ಹೋರಾಟ ನಡೆಸುವುದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಇದರ ಹೆಸರಲ್ಲಿ ಏಕಾಏಕಿ ರಾಜ್ಯ ಬಂದ್ ಮಾಡುವುದು ಸರಿ ಕಾಣೋದಿಲ್ಲ. ಕನ್ನಡ ಹೋರಾಟ ಹೇಗೆ ಮಾಡಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
The Karnataka Bund has been called for a ban on MES, condemning the atrocities on Kannada and Kannadigas in Belagavi. On December 31, some Kannada organizations called for Karnataka Band to cooperate. The debate has just begun. The film industry has also responded. Actor Shivrajkumar Speaking of this, ‘there is a problem. But it has to be corrected very wisely. ” Actor Yash has also said, “We should never take a loss and protest against another.”
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am