ಬ್ರೇಕಿಂಗ್ ನ್ಯೂಸ್
27-12-21 01:01 pm HK Desk news ಕರ್ನಾಟಕ
ರಾಯಚೂರು, ಡಿ.27 : ಮತಾಂತರ ನಿಷೇಧ ಕಾಯ್ದೆಯ ನೆಪದಲ್ಲಿ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಅಲೆಮಾರಿಗಳು, ಭಿಕ್ಷುಕರನ್ನು ಎಂದು ತೋರಿಸಿ ಅವಮಾನಿಸಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಆರ್.ಮಾನಯ್ಯ ಎಂಬವರು ದೂರು ನೀಡಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಎಸ್ಸಿ- ಎಸ್ಟಿ ಸಮುದಾಯದ ಜನರು ಹಣ, ಅಕ್ಕಿ, ಬಟ್ಟೆ ಇನ್ನಿತರ ದೇಣಿಗೆಯ ಆಮಿಷಕ್ಕೊಳಗಾಗಿ ಮತಾಂತರ ಆಗುತ್ತಿದ್ದಾರೆ ಎಂದು ಸದನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಿಂಬಿಸಿದ್ದು, ಆಮೂಲಕ ಅವರನ್ನು ಹೀನಾಯವಾಗಿ ತೋರಿಸಿದ್ದಾರೆ ಎಂದು ದೂರಿದ್ದಾರೆ. ಹಾಗಾಗಿ ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಬಿಜೆಪಿ ಶಾಸಕರ ವಿರುದ್ಧ ಜಾತಿ ನಿಂದನೆ ಕಾಯ್ದೆಯಡಿ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗೃಹ ಸಚಿವರು ಮಸೂದೆಯ ಉದ್ದೇಶ ಮತ್ತು ವಿವರಗಳನ್ನು ಸದನಕ್ಕೆ ಮಂಡಿಸುತ್ತಿದ್ದಾಗ ಬಿಜೆಪಿ ಶಾಸಕರು ಮೇಜು ಕುಟ್ಟಿ ಅನುಮೋದಿಸಿದ್ದಾರೆ. ಈ ರೀತಿಯ ಕಾಯ್ದೆ ತಂದುದನ್ನು ಬಿಜೆಪಿ ಶಾಸಕರು ಅಭಿನಂದಿಸಿದ್ದು, ಹಾಗಾಗಿ ಜಾತಿ ನಿಂದನೆ ಮಾಡಿರುವುದರಲ್ಲಿ ಅವರ ಪಾತ್ರವೂ ಇದೆ. ಎಲ್ಲರ ವಿರುದ್ಧವೂ ಕೇಸು ದಾಖಲಿಸಬೇಕೆಂದು ಠಾಣಾಧಿಕಾರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರಕಾರ ಮಂಡಿಸಿದ್ದು, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ವಿರೋಧ ನಡುವೆಯೂ ಅಂಕಿತ ಪಡೆದಿದೆ. ಆದರೆ ವಿಧಾನ ಪರಿಷತ್ತಿನಲ್ಲಿ ಮಂಡನೆ ಸಾಧ್ಯವಾಗಿರಲಿಲ್ಲ. ಮುಂದಿನ ಫೆಬ್ರವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಮಸೂದೆ ಮಂಡಿಸಿ ಅನುಮತಿ ಪಡೆಯುವ ವಿಶ್ವಾಸದಲ್ಲಿ ಬಿಜೆಪಿ ಸರಕಾರ ಇದೆ.
A complaint has been lodged against the Chief Minister Basavaraj Bommai, state Home Minister Araga Jnanendra, Speaker Vishveshwara Hegde Kageri and all BJP legislators in connection with presenting of the controversial Karnataka Protection of Right to Freedom of Religion Bill, 2021 popularly known as Anti-conversion Bill.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am