ಬ್ರೇಕಿಂಗ್ ನ್ಯೂಸ್
27-12-21 01:01 pm HK Desk news ಕರ್ನಾಟಕ
ರಾಯಚೂರು, ಡಿ.27 : ಮತಾಂತರ ನಿಷೇಧ ಕಾಯ್ದೆಯ ನೆಪದಲ್ಲಿ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಅಲೆಮಾರಿಗಳು, ಭಿಕ್ಷುಕರನ್ನು ಎಂದು ತೋರಿಸಿ ಅವಮಾನಿಸಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಆರ್.ಮಾನಯ್ಯ ಎಂಬವರು ದೂರು ನೀಡಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಎಸ್ಸಿ- ಎಸ್ಟಿ ಸಮುದಾಯದ ಜನರು ಹಣ, ಅಕ್ಕಿ, ಬಟ್ಟೆ ಇನ್ನಿತರ ದೇಣಿಗೆಯ ಆಮಿಷಕ್ಕೊಳಗಾಗಿ ಮತಾಂತರ ಆಗುತ್ತಿದ್ದಾರೆ ಎಂದು ಸದನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಿಂಬಿಸಿದ್ದು, ಆಮೂಲಕ ಅವರನ್ನು ಹೀನಾಯವಾಗಿ ತೋರಿಸಿದ್ದಾರೆ ಎಂದು ದೂರಿದ್ದಾರೆ. ಹಾಗಾಗಿ ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಬಿಜೆಪಿ ಶಾಸಕರ ವಿರುದ್ಧ ಜಾತಿ ನಿಂದನೆ ಕಾಯ್ದೆಯಡಿ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗೃಹ ಸಚಿವರು ಮಸೂದೆಯ ಉದ್ದೇಶ ಮತ್ತು ವಿವರಗಳನ್ನು ಸದನಕ್ಕೆ ಮಂಡಿಸುತ್ತಿದ್ದಾಗ ಬಿಜೆಪಿ ಶಾಸಕರು ಮೇಜು ಕುಟ್ಟಿ ಅನುಮೋದಿಸಿದ್ದಾರೆ. ಈ ರೀತಿಯ ಕಾಯ್ದೆ ತಂದುದನ್ನು ಬಿಜೆಪಿ ಶಾಸಕರು ಅಭಿನಂದಿಸಿದ್ದು, ಹಾಗಾಗಿ ಜಾತಿ ನಿಂದನೆ ಮಾಡಿರುವುದರಲ್ಲಿ ಅವರ ಪಾತ್ರವೂ ಇದೆ. ಎಲ್ಲರ ವಿರುದ್ಧವೂ ಕೇಸು ದಾಖಲಿಸಬೇಕೆಂದು ಠಾಣಾಧಿಕಾರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರಕಾರ ಮಂಡಿಸಿದ್ದು, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ವಿರೋಧ ನಡುವೆಯೂ ಅಂಕಿತ ಪಡೆದಿದೆ. ಆದರೆ ವಿಧಾನ ಪರಿಷತ್ತಿನಲ್ಲಿ ಮಂಡನೆ ಸಾಧ್ಯವಾಗಿರಲಿಲ್ಲ. ಮುಂದಿನ ಫೆಬ್ರವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಮಸೂದೆ ಮಂಡಿಸಿ ಅನುಮತಿ ಪಡೆಯುವ ವಿಶ್ವಾಸದಲ್ಲಿ ಬಿಜೆಪಿ ಸರಕಾರ ಇದೆ.
A complaint has been lodged against the Chief Minister Basavaraj Bommai, state Home Minister Araga Jnanendra, Speaker Vishveshwara Hegde Kageri and all BJP legislators in connection with presenting of the controversial Karnataka Protection of Right to Freedom of Religion Bill, 2021 popularly known as Anti-conversion Bill.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm