ಬ್ರೇಕಿಂಗ್ ನ್ಯೂಸ್
27-12-21 01:01 pm HK Desk news ಕರ್ನಾಟಕ
ರಾಯಚೂರು, ಡಿ.27 : ಮತಾಂತರ ನಿಷೇಧ ಕಾಯ್ದೆಯ ನೆಪದಲ್ಲಿ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಅಲೆಮಾರಿಗಳು, ಭಿಕ್ಷುಕರನ್ನು ಎಂದು ತೋರಿಸಿ ಅವಮಾನಿಸಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಆರ್.ಮಾನಯ್ಯ ಎಂಬವರು ದೂರು ನೀಡಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಎಸ್ಸಿ- ಎಸ್ಟಿ ಸಮುದಾಯದ ಜನರು ಹಣ, ಅಕ್ಕಿ, ಬಟ್ಟೆ ಇನ್ನಿತರ ದೇಣಿಗೆಯ ಆಮಿಷಕ್ಕೊಳಗಾಗಿ ಮತಾಂತರ ಆಗುತ್ತಿದ್ದಾರೆ ಎಂದು ಸದನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಿಂಬಿಸಿದ್ದು, ಆಮೂಲಕ ಅವರನ್ನು ಹೀನಾಯವಾಗಿ ತೋರಿಸಿದ್ದಾರೆ ಎಂದು ದೂರಿದ್ದಾರೆ. ಹಾಗಾಗಿ ಮುಖ್ಯಮಂತ್ರಿ, ಗೃಹ ಸಚಿವ ಮತ್ತು ಬಿಜೆಪಿ ಶಾಸಕರ ವಿರುದ್ಧ ಜಾತಿ ನಿಂದನೆ ಕಾಯ್ದೆಯಡಿ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗೃಹ ಸಚಿವರು ಮಸೂದೆಯ ಉದ್ದೇಶ ಮತ್ತು ವಿವರಗಳನ್ನು ಸದನಕ್ಕೆ ಮಂಡಿಸುತ್ತಿದ್ದಾಗ ಬಿಜೆಪಿ ಶಾಸಕರು ಮೇಜು ಕುಟ್ಟಿ ಅನುಮೋದಿಸಿದ್ದಾರೆ. ಈ ರೀತಿಯ ಕಾಯ್ದೆ ತಂದುದನ್ನು ಬಿಜೆಪಿ ಶಾಸಕರು ಅಭಿನಂದಿಸಿದ್ದು, ಹಾಗಾಗಿ ಜಾತಿ ನಿಂದನೆ ಮಾಡಿರುವುದರಲ್ಲಿ ಅವರ ಪಾತ್ರವೂ ಇದೆ. ಎಲ್ಲರ ವಿರುದ್ಧವೂ ಕೇಸು ದಾಖಲಿಸಬೇಕೆಂದು ಠಾಣಾಧಿಕಾರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರಕಾರ ಮಂಡಿಸಿದ್ದು, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ವಿರೋಧ ನಡುವೆಯೂ ಅಂಕಿತ ಪಡೆದಿದೆ. ಆದರೆ ವಿಧಾನ ಪರಿಷತ್ತಿನಲ್ಲಿ ಮಂಡನೆ ಸಾಧ್ಯವಾಗಿರಲಿಲ್ಲ. ಮುಂದಿನ ಫೆಬ್ರವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಮಸೂದೆ ಮಂಡಿಸಿ ಅನುಮತಿ ಪಡೆಯುವ ವಿಶ್ವಾಸದಲ್ಲಿ ಬಿಜೆಪಿ ಸರಕಾರ ಇದೆ.
A complaint has been lodged against the Chief Minister Basavaraj Bommai, state Home Minister Araga Jnanendra, Speaker Vishveshwara Hegde Kageri and all BJP legislators in connection with presenting of the controversial Karnataka Protection of Right to Freedom of Religion Bill, 2021 popularly known as Anti-conversion Bill.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am