ಬ್ರೇಕಿಂಗ್ ನ್ಯೂಸ್
28-12-21 02:32 pm HK Desk news ಕರ್ನಾಟಕ
ಬೆಂಗಳೂರು, ಡಿ.28 : ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ವರ್ಷದ ಜನವರಿ 1ರಿಂದ ಫೆಬ್ರವರಿ 7ರ ವರೆಗೆ ಪ್ರತಿದಿನವೂ ಸೂರ್ಯ ನಮಸ್ಕಾರ ನಡೆಸುವಂತೆ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ ಪಿಯು ಮಕ್ಕಳಲ್ಲಿ ಯೋಗಾಸನದ ಬಗ್ಗೆ ಆಸಕ್ತಿ ಹುಟ್ಟಿಸುವ ಭಾಗವಾಗಿ ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆಯೋಜಿಸಲು ಸೂಚನೆ ನೀಡಲಾಗಿದೆ. ದೇಶದ ಎಲ್ಲ 30 ರಾಜ್ಯಗಳ ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಈ ಬಗ್ಗೆ ಕೇಂದ್ರ ಸರಕಾರವು ಡಿ.16ರಂದು ಸುತ್ತೋಲೆ ಹೊರಡಿಸಿತ್ತು.
ಜನವರಿ ಒಂದರಿಂದಲೇ ಸೂರ್ಯ ನಮಸ್ಕಾರ ನಡೆಸಬೇಕಾಗಿದ್ದು, ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡಲು ಸೂಚನೆ ನೀಡಲಾಗಿದೆ. ಜ.1ರಿಂದ ಫೆ.7ರ ನಡುವೆ 38 ದಿನಗಳಿದ್ದು, 21 ಶಾಲಾ ದಿನಗಳಲ್ಲಿ ಬೆಳಗ್ಗೆ ಸೂರ್ಯ ನಮಸ್ಕಾರ ಮಾಡಿದರೆ 21 ದಿನಗಳ ಪರ್ಯಂತ ಯೋಗ ನಡೆಸಿದಂತಾಗುತ್ತದೆ. ಪ್ರತಿ ದಿನ 13 ಸೂರ್ಯ ನಮಸ್ಕಾರ ಮಾಡಬೇಕಿದ್ದು, ಇದರಂತೆ 21 ದಿವಸಗಳಲ್ಲಿ 273 ಬಾರಿ ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಇದನ್ನು ಪೂರ್ತಿಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಯೋಗ ಫೆಡರೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಇ-ಸರ್ಟಿಫಿಕೇಟ್ ನೀಡಲಾಗುತ್ತದೆ.
ಪ್ರತಿ ಕಾಲೇಜುಗಳಲ್ಲಿ ಕೈಗೊಂಡ ಕ್ರಮಗಳು, ಆಯಾ ದಿನದಲ್ಲಿ ಭಾಗವಹಿಸಿದ ಚಟುವಟಿಕೆ ಬಗ್ಗೆ ಆಯಾ ಜಿಲ್ಲೆಯ ಶಿಕ್ಣ ಇಲಾಖೆ ಉಪ ನಿರ್ದೇಶಕರಿಗೆ ಸಲ್ಲಿಸಬೇಕಾಗುತ್ತದೆ. ಸೂರ್ಯ ನಮಸ್ಕಾರವು ವಿದ್ಯಾರ್ಥಿಗಳ ಆರೋಗ್ಯ ಮತ್ತು ಮನೋಬಲ ವೃದ್ಧಿಗೆ ಸಹಾಯಕ. ಅದಕ್ಕಾಗಿ ಸೂಕ್ತ ಗುರುವನ್ನು ನೇಮಿಸಿಕೊಂಡು ಯೋಗಾಭ್ಯಾಸ ನಡೆಸುವಂತೆ ಕೇಂದ್ರ ಶಿಕ್ಷಣ ಇಲಾಖೆಯ ಅದೇಶ ತಿಳಿಸಿದೆ.
Pre-university Education department of the state has asked all PU colleges to hold Surya Namaskar programme from January 1 to February 7. In addition, on January 26, it has asked the school authorities to get the same done with music.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm