ಬ್ರೇಕಿಂಗ್ ನ್ಯೂಸ್
28-12-21 02:32 pm HK Desk news ಕರ್ನಾಟಕ
ಬೆಂಗಳೂರು, ಡಿ.28 : ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ವರ್ಷದ ಜನವರಿ 1ರಿಂದ ಫೆಬ್ರವರಿ 7ರ ವರೆಗೆ ಪ್ರತಿದಿನವೂ ಸೂರ್ಯ ನಮಸ್ಕಾರ ನಡೆಸುವಂತೆ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ ಪಿಯು ಮಕ್ಕಳಲ್ಲಿ ಯೋಗಾಸನದ ಬಗ್ಗೆ ಆಸಕ್ತಿ ಹುಟ್ಟಿಸುವ ಭಾಗವಾಗಿ ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆಯೋಜಿಸಲು ಸೂಚನೆ ನೀಡಲಾಗಿದೆ. ದೇಶದ ಎಲ್ಲ 30 ರಾಜ್ಯಗಳ ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಈ ಬಗ್ಗೆ ಕೇಂದ್ರ ಸರಕಾರವು ಡಿ.16ರಂದು ಸುತ್ತೋಲೆ ಹೊರಡಿಸಿತ್ತು.
ಜನವರಿ ಒಂದರಿಂದಲೇ ಸೂರ್ಯ ನಮಸ್ಕಾರ ನಡೆಸಬೇಕಾಗಿದ್ದು, ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡಲು ಸೂಚನೆ ನೀಡಲಾಗಿದೆ. ಜ.1ರಿಂದ ಫೆ.7ರ ನಡುವೆ 38 ದಿನಗಳಿದ್ದು, 21 ಶಾಲಾ ದಿನಗಳಲ್ಲಿ ಬೆಳಗ್ಗೆ ಸೂರ್ಯ ನಮಸ್ಕಾರ ಮಾಡಿದರೆ 21 ದಿನಗಳ ಪರ್ಯಂತ ಯೋಗ ನಡೆಸಿದಂತಾಗುತ್ತದೆ. ಪ್ರತಿ ದಿನ 13 ಸೂರ್ಯ ನಮಸ್ಕಾರ ಮಾಡಬೇಕಿದ್ದು, ಇದರಂತೆ 21 ದಿವಸಗಳಲ್ಲಿ 273 ಬಾರಿ ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಇದನ್ನು ಪೂರ್ತಿಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಯೋಗ ಫೆಡರೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಇ-ಸರ್ಟಿಫಿಕೇಟ್ ನೀಡಲಾಗುತ್ತದೆ.
ಪ್ರತಿ ಕಾಲೇಜುಗಳಲ್ಲಿ ಕೈಗೊಂಡ ಕ್ರಮಗಳು, ಆಯಾ ದಿನದಲ್ಲಿ ಭಾಗವಹಿಸಿದ ಚಟುವಟಿಕೆ ಬಗ್ಗೆ ಆಯಾ ಜಿಲ್ಲೆಯ ಶಿಕ್ಣ ಇಲಾಖೆ ಉಪ ನಿರ್ದೇಶಕರಿಗೆ ಸಲ್ಲಿಸಬೇಕಾಗುತ್ತದೆ. ಸೂರ್ಯ ನಮಸ್ಕಾರವು ವಿದ್ಯಾರ್ಥಿಗಳ ಆರೋಗ್ಯ ಮತ್ತು ಮನೋಬಲ ವೃದ್ಧಿಗೆ ಸಹಾಯಕ. ಅದಕ್ಕಾಗಿ ಸೂಕ್ತ ಗುರುವನ್ನು ನೇಮಿಸಿಕೊಂಡು ಯೋಗಾಭ್ಯಾಸ ನಡೆಸುವಂತೆ ಕೇಂದ್ರ ಶಿಕ್ಷಣ ಇಲಾಖೆಯ ಅದೇಶ ತಿಳಿಸಿದೆ.
Pre-university Education department of the state has asked all PU colleges to hold Surya Namaskar programme from January 1 to February 7. In addition, on January 26, it has asked the school authorities to get the same done with music.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am