ಬ್ರೇಕಿಂಗ್ ನ್ಯೂಸ್
28-12-21 02:32 pm HK Desk news ಕರ್ನಾಟಕ
ಬೆಂಗಳೂರು, ಡಿ.28 : ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ವರ್ಷದ ಜನವರಿ 1ರಿಂದ ಫೆಬ್ರವರಿ 7ರ ವರೆಗೆ ಪ್ರತಿದಿನವೂ ಸೂರ್ಯ ನಮಸ್ಕಾರ ನಡೆಸುವಂತೆ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ ಪಿಯು ಮಕ್ಕಳಲ್ಲಿ ಯೋಗಾಸನದ ಬಗ್ಗೆ ಆಸಕ್ತಿ ಹುಟ್ಟಿಸುವ ಭಾಗವಾಗಿ ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆಯೋಜಿಸಲು ಸೂಚನೆ ನೀಡಲಾಗಿದೆ. ದೇಶದ ಎಲ್ಲ 30 ರಾಜ್ಯಗಳ ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಈ ಬಗ್ಗೆ ಕೇಂದ್ರ ಸರಕಾರವು ಡಿ.16ರಂದು ಸುತ್ತೋಲೆ ಹೊರಡಿಸಿತ್ತು.
ಜನವರಿ ಒಂದರಿಂದಲೇ ಸೂರ್ಯ ನಮಸ್ಕಾರ ನಡೆಸಬೇಕಾಗಿದ್ದು, ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡಲು ಸೂಚನೆ ನೀಡಲಾಗಿದೆ. ಜ.1ರಿಂದ ಫೆ.7ರ ನಡುವೆ 38 ದಿನಗಳಿದ್ದು, 21 ಶಾಲಾ ದಿನಗಳಲ್ಲಿ ಬೆಳಗ್ಗೆ ಸೂರ್ಯ ನಮಸ್ಕಾರ ಮಾಡಿದರೆ 21 ದಿನಗಳ ಪರ್ಯಂತ ಯೋಗ ನಡೆಸಿದಂತಾಗುತ್ತದೆ. ಪ್ರತಿ ದಿನ 13 ಸೂರ್ಯ ನಮಸ್ಕಾರ ಮಾಡಬೇಕಿದ್ದು, ಇದರಂತೆ 21 ದಿವಸಗಳಲ್ಲಿ 273 ಬಾರಿ ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಇದನ್ನು ಪೂರ್ತಿಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಯೋಗ ಫೆಡರೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಇ-ಸರ್ಟಿಫಿಕೇಟ್ ನೀಡಲಾಗುತ್ತದೆ.
ಪ್ರತಿ ಕಾಲೇಜುಗಳಲ್ಲಿ ಕೈಗೊಂಡ ಕ್ರಮಗಳು, ಆಯಾ ದಿನದಲ್ಲಿ ಭಾಗವಹಿಸಿದ ಚಟುವಟಿಕೆ ಬಗ್ಗೆ ಆಯಾ ಜಿಲ್ಲೆಯ ಶಿಕ್ಣ ಇಲಾಖೆ ಉಪ ನಿರ್ದೇಶಕರಿಗೆ ಸಲ್ಲಿಸಬೇಕಾಗುತ್ತದೆ. ಸೂರ್ಯ ನಮಸ್ಕಾರವು ವಿದ್ಯಾರ್ಥಿಗಳ ಆರೋಗ್ಯ ಮತ್ತು ಮನೋಬಲ ವೃದ್ಧಿಗೆ ಸಹಾಯಕ. ಅದಕ್ಕಾಗಿ ಸೂಕ್ತ ಗುರುವನ್ನು ನೇಮಿಸಿಕೊಂಡು ಯೋಗಾಭ್ಯಾಸ ನಡೆಸುವಂತೆ ಕೇಂದ್ರ ಶಿಕ್ಷಣ ಇಲಾಖೆಯ ಅದೇಶ ತಿಳಿಸಿದೆ.
Pre-university Education department of the state has asked all PU colleges to hold Surya Namaskar programme from January 1 to February 7. In addition, on January 26, it has asked the school authorities to get the same done with music.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm