ಬ್ರೇಕಿಂಗ್ ನ್ಯೂಸ್
28-12-21 10:12 pm HK Desk news ಕರ್ನಾಟಕ
ಮಂಡ್ಯ, ಡಿ.28 : ಮತಾಂತರ ನಿಷೇಧ ಕಾಯ್ದೆ ಆರೆಸ್ಸೆಸ್ ಅಜೆಂಡಾ. ಕಾಯ್ದೆಯ ಕರಡನ್ನು ಹಿಂದೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಲಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈಗ ಆರೆಸ್ಸೆಸ್ ಹೇಳಿದಂತೆ ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರಕಾರ ಜಾರಲು ಹೊರಟಿದೆ. ಇದೇ ಕರಡನ್ನು ನಾನು ಅಧಿಕಾರದಲ್ಲಿದ್ದಾಗ ರೆಡಿ ಮಾಡಿದ್ದು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹೌದು.. ಆ ಮಸೂದೆಯ ಕರಡನ್ನು ನನ್ನ ಮುಂದೆ ಇಟ್ಟಿದ್ದರು. ಅದನ್ನು ಬರೆದಿದ್ದ ಎಲ್ಲರೂ ಆರೆಸ್ಸೆಸ್ ನವರಾಗಿದ್ದರು. ನಾನು ಆಗ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಆಂಜನೇಯರಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ. ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಸೂಚಿಸಿ ಬರೆದಿದ್ದರು.

ಮತಾಂತರ ನಿಷೇಧ ಮಸೂದೆಯ ಕರಡು ತಂದಿದ್ದು 2011ರಲ್ಲಿ ಯಡಿಯೂರಪ್ಪ ಸರ್ಕಾರ ಇದ್ದಾಗ. ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದ್ದೆ. ಯಡಿಯೂರಪ್ಪ ಕೂಡ ಅದನ್ನ ಒಪ್ಪಿಕೊಂಡಿದ್ದರು ಎಂದು ಹೇಳಿದರು ಸಿದ್ದರಾಮಯ್ಯ.
ಈಶ್ವರಪ್ಪ ಒಬ್ಬ ಪೆದ್ದ...!
ಈ ಮಸೂದೆಯನ್ನು ಆರೆಸ್ಸೆಸ್ ನವರು ಮಾಡಿರೋದು ಅಂತ ಸದನದಲ್ಲಿ ಹೇಳಿದ್ದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಆದರೆ ಈಶ್ವರಪ್ಪ ಒಬ್ಬ ಪೆದ್ದ. ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾನೆ ಎಂದು ಸಿದ್ದು ಟೀಕಿಸಿದರು.

ಸಂವಿಧಾನದಲ್ಲೇ ಯಾವುದೇ ಮತ, ಧರ್ಮ ಸ್ವೀಕಾರಕ್ಕೆ ಮುಕ್ತ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಇವನ್ಯಾರು? ಯಾರು ಯಾರನ್ನೇ ಮದುವೆ ಆದ್ರೂ ಪ್ರಶ್ನೆ ಮಾಡುವಂತೆ ಇಲ್ಲ. ಆದರೆ ಈ ಕಾನೂನು ಮೂಲಕ ಪ್ರೀತಿಸಿ ಮದುವೆಯಾಗೋದಕ್ಕೂ ಅವಕಾಶ ಇಲ್ಲದಾಗಿದೆ. ಇವರು ಜನವಿರೋಧಿ ಕಾನೂನು ತಂದಿದ್ದಾರೆ. ಬಿಜೆಪಿಯವರದ್ದು ಜನ ವಿರೋಧಿ ಆರೆಸ್ಸೆಸ್ ಸಿದ್ಧಾಂತ. ಕಾಂಗ್ರೆಸ್ ಪಕ್ಷದ್ದು ಜನಪರ ಸಿದ್ಧಾಂತ. ನಾವು ಜನಪರ ಇರುವವರು. ಬಿಜೆಪಿಯವರು ಜನರನ್ನ ಬೇರ್ಪಡಿಸುವವರು ಎಂದು ಸಿದ್ದರಾಮಯ್ಯ ಟೀಕಿಸಿದರು.
The Congress will repeal the proposed contentious anti-conversion legislations immediately after coming to power following the 2023 Assembly polls in Karnataka, Leader of Opposition Siddaramaiah said on Monday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm