ಬ್ರೇಕಿಂಗ್ ನ್ಯೂಸ್
29-12-21 02:44 pm HK Desk news ಕರ್ನಾಟಕ
ಹುಬ್ಬಳ್ಳಿ, ಡಿ. 29: ವ್ಯಾಪಾರಸ್ಥರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಡಿ.31 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಅನ್ನು ಹಿಂಪಡೆಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಂದಾಗಿ ಎರಡು ವರ್ಷಗಳಿಂದ ವಾಣಿಜ್ಯ ಚಟುವಟಿಕೆ ಸರಿಯಾಗಿ ನಡೆಯುತ್ತಿಲ್ಲ. ಅದನ್ನು ಗಮನದಲ್ಲಿಟ್ಟುಕೊಂಡು ಬಂದ್ಗೆ ಮುಂದಾಗಬಾರದು ಎಂದರು. ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಗೈಗೊಳ್ಳಲಾಗುವುದು ಎಂದರು. ಎಂಇಎಸ್ ನಿಷೇಧಿಸುವುದು ಒಂದೆರಡು ದಿನಗಳಲ್ಲಿ ಆಗುವುದಲ್ಲ. ಜನರೇ ಎಂಇಎಸ್ ತಿರಸ್ಕರಿಸಿದ್ದಾರೆ ಎಂದು ಹೇಳಿದರು
ಬಂದ್ಗೆ ಕರೆಗೆ ಯಾವುದೇ ಬದಲಾವಣೆ ಇಲ್ಲ; ವಾಟಾಳ್ ನಾಗರಾಜ್
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು. ಬಂದ್ ಬೆಂಬಲಿಸುವಂತೆ ಜನರನ್ನು ಕೋರುವುದಕ್ಕಾಗಿ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಬಂದ್ನಿಂದ ಹಿಂದೆ ಸರಿಯುವುದಿಲ್ಲ. ಅಂದು ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಗುವುದು. ಸಾವಿರಾರು ಮಂದಿ ಭಾಗವಹಿಸಲಿದ್ದಾರೆ. ಜನರು ನಮ್ಮ ಉದ್ದೇಶವನ್ನು ಅರಿತು ಬಂದ್ಗೆ ಬೆಂಬಲ ಕೊಡಬೇಕು ಎಂದು ಕೋರಿದರು. ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅವರು ಹಾಗೂ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.
Karnataka Bandh on 31st December Home Minister asks Kannada outfits to cancel, Vatal Nagaraj says no chance. Kannada organisations may have called for a ‘Karnataka Bandh’ on Dec 31, seeking a ban on Maharashtra Ekikaran Samithi (MES) over the recent statue flare-up, but it has left the state divided on the issue.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am