ಬ್ರೇಕಿಂಗ್ ನ್ಯೂಸ್
29-12-21 02:44 pm HK Desk news ಕರ್ನಾಟಕ
ಹುಬ್ಬಳ್ಳಿ, ಡಿ. 29: ವ್ಯಾಪಾರಸ್ಥರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಡಿ.31 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಅನ್ನು ಹಿಂಪಡೆಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಂದಾಗಿ ಎರಡು ವರ್ಷಗಳಿಂದ ವಾಣಿಜ್ಯ ಚಟುವಟಿಕೆ ಸರಿಯಾಗಿ ನಡೆಯುತ್ತಿಲ್ಲ. ಅದನ್ನು ಗಮನದಲ್ಲಿಟ್ಟುಕೊಂಡು ಬಂದ್ಗೆ ಮುಂದಾಗಬಾರದು ಎಂದರು. ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಗೈಗೊಳ್ಳಲಾಗುವುದು ಎಂದರು. ಎಂಇಎಸ್ ನಿಷೇಧಿಸುವುದು ಒಂದೆರಡು ದಿನಗಳಲ್ಲಿ ಆಗುವುದಲ್ಲ. ಜನರೇ ಎಂಇಎಸ್ ತಿರಸ್ಕರಿಸಿದ್ದಾರೆ ಎಂದು ಹೇಳಿದರು
ಬಂದ್ಗೆ ಕರೆಗೆ ಯಾವುದೇ ಬದಲಾವಣೆ ಇಲ್ಲ; ವಾಟಾಳ್ ನಾಗರಾಜ್
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು. ಬಂದ್ ಬೆಂಬಲಿಸುವಂತೆ ಜನರನ್ನು ಕೋರುವುದಕ್ಕಾಗಿ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಬಂದ್ನಿಂದ ಹಿಂದೆ ಸರಿಯುವುದಿಲ್ಲ. ಅಂದು ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಗುವುದು. ಸಾವಿರಾರು ಮಂದಿ ಭಾಗವಹಿಸಲಿದ್ದಾರೆ. ಜನರು ನಮ್ಮ ಉದ್ದೇಶವನ್ನು ಅರಿತು ಬಂದ್ಗೆ ಬೆಂಬಲ ಕೊಡಬೇಕು ಎಂದು ಕೋರಿದರು. ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅವರು ಹಾಗೂ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.
Karnataka Bandh on 31st December Home Minister asks Kannada outfits to cancel, Vatal Nagaraj says no chance. Kannada organisations may have called for a ‘Karnataka Bandh’ on Dec 31, seeking a ban on Maharashtra Ekikaran Samithi (MES) over the recent statue flare-up, but it has left the state divided on the issue.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm