ಬ್ರೇಕಿಂಗ್ ನ್ಯೂಸ್
30-12-21 04:23 pm HK Desk news ಕರ್ನಾಟಕ
ಬೆಂಗಳೂರು, ಡಿ.30: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿಯಲ್ಲಿ ಅಪಘಾತ ಸಂಭವಿಸಿ ಸುಮಾರು ಒಂಬತ್ತು ವಾಹನಗಳು ಜಖಂಗೊಂಡು, ಒರ್ವನಿಗೆ ಗಾಯವಾಗಿರುವ ಘಟನೆ ನೆಲಮಂಗಲದ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ.
ದಟ್ಟ ಮಂಜಿನಿಂದಾಗಿ ಎದುರಿನ ವಾಹನ ಸ್ಪಷ್ಟವಾಗಿ ಕಂಡಿರಲಿಲ್ಲ, ಹೀಗಾಗಿ ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ ಕಾರಣ ಹಿಂದೆಯೇ ವೇಗವಾಗಿ ಬರುತ್ತಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ ಲಾರಿ ಸೇರಿದಂತೆ ಒಂಬತ್ತು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ.


ಅಪಘಾತದ ರಬಸಕ್ಕೆ ಲಾರಿ ಹಾಗೂ ಇತರ ವಾಹನಗಳು ರಸ್ತೆ ವಿಭಜಕದ ಮೇಲೆರಿ, ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಸಂಪೂರ್ಣ ಅಡ್ಡಲಾಗಿ ನಿಂತಿವೆ. ಇದರಿಂದ ಹಿಂದಿನಿಂದ ಬಂದ ವಾಹನಗಳು ಚಲಿಸಲಾಗದೆ ಸಂಚಾರ ದಟ್ಟಣೆ ಉಂಟಾಯಿತು. ಮುಂಜಾನೆ ಅಪಘಾತ ಸಂಭವಿಸಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಬೆಳಗ್ಗೆ 11 ಗಂಟೆಯವರೆಗೂ ಹರಸಾಹಸ ಪಟ್ಟರು.

ಅನಿವಾರ್ಯವಾಗಿ ಕೆಲ ಕಾಲ ಹೆದ್ಧಾರಿಯ ಬಲಭಾಗದ ರಸ್ತೆಯಲ್ಲೇ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ತರಕಾರಿ ಲಾರಿ ಅಪಘಾತದಿಂದ ರಸ್ತೆಯಲ್ಲೆಲ್ಲಾ ತರಕಾರಿ ಚೆಲ್ಲಾಪಿಲ್ಲಿಯಾಗಿತ್ತು. ಕ್ಯಾಂಟರ್ ಡಿಕ್ಕಿಯಿಂದ ವಾಹನ ಚಾಲಕನ ಕಾಲು ಮುರಿದಿದೆ. ಕಾರು ಡಿಕ್ಕಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.
As many as 12 people were injured and around 10 vehicles were damaged in a serial accident that occurred on National Highway 4 in Nelamangala due to heavy fog and poor visibility in the early hours of Thursday. Traffic movement on NH 4 was disrupted for over two hours as hundreds of vehicles were stranded on either side of the roads. The Nelamangala traffic police struggled to restore normalcy and used cranes to pull out the damaged vehicle to clear the road.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm