ಬ್ರೇಕಿಂಗ್ ನ್ಯೂಸ್
30-12-21 09:37 pm HK Desk news ಕರ್ನಾಟಕ
ಬೆಂಗಳೂರು, ಡಿ.30 : ಕನ್ನಡ ಪರ ಹೋರಾಟಗಾರರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿರುವ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು ಡಿ.31ರ ಕರ್ನಾಟಕ ಬಂದ್ ಕರೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಉದ್ಧಟತನವನ್ನು ವಿರೋಧಿಸಿ ಮತ್ತು ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧಿಸಬೇಕೆಂದು ಆಗ್ರಹಿಸಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು.

ಒಂದೆಡೆ ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ, ಮತ್ತೊಂದೆಡೆ ಓಮಿಕ್ರಾನ್ ವೈರಸ್ ಪ್ರಸರಣದ ಹಿನ್ನೆಲೆಯಲ್ಲಿ ರಾಜ್ಯ ಬಂದ್ ನಡೆಸದಂತೆ ರಾಜ್ಯ ಸರಕಾರ ಸಾಕಷ್ಟು ಬಾರಿ ಮನವಿ ಮಾಡಿತ್ತು. ಸಿಎಂ ಬೊಮ್ಮಾಯಿ ಸ್ವತಃ ಮನವಿ ಮಾಡಿಕೊಂಡಿದ್ದರೂ ಕನ್ನಡ ಪರ ಸಂಘಟನೆಗಳು ಹಿಂದೆ ಸರಿದಿರಲಿಲ್ಲ. ಸಿಎಂ ಬೊಮ್ಮಾಯಿ ಮಾಧ್ಯಮಗಳ ಮೂಲಕ ಬಂದ್ ಹಿಂಪಡೆಯುವಂತೆ ಮನವಿ ಮಾಡಿದ್ದಲ್ಲದೇ ಎಂಇಎಸ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಿರುವ ಬಗ್ಗೆ ಹೇಳಿದ್ದರು. ನಮ್ಮ ಮನವಿ ಓಗೊಡದೆ ಕೋವಿಡ್ ನಿಯಮ ಮೀರಿ ಬಂದ್ ನಡೆಸಿದಲ್ಲಿ ಸೂಕ್ತ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದರು. ಒಂದಷ್ಟು ಹೋರಾಟಗಾರರು ಬಂದ್ ನಿಂದ ಹಿಂದೆ ಸರಿದರೆ, ವಾಟಾಳ್ ಪಕ್ಷದ ನಾಗರಾಜ್ ಸೇರಿ ಕೆಲವರು ಮಾತ್ರ ಬಂದ್ ಕರೆಯಿಂದ ಹಿಂದೆ ಸರಿದಿರಲಿಲ್ಲ.

ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆಯ ಮೇರೆಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಸಿಎಂ ಕಚೇರಿಗೆ ಭೇಟಿ ನೀಡಿದ್ದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಬಂದ್, ಪ್ರತಿಭಟನಾ ರ್ಯಾಲಿಗಳಿಂದ ಉಂಟಾಗಬಲ್ಲ ತೊಂದರೆಗಳ ಬಗ್ಗೆ ಸಿಎಂ ಬೊಮ್ಮಾಯಿ ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಬಂದ್ ಕರೆಯಿಂದ ಹಿಂದೆ ಸರಿದಿದ್ದಾರೆ.
ಸಿಎಂ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್ ಸಂಘಟನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.ಎಂಇಎಸ್ ಸಂಘಟನೆ ಬ್ಯಾನ್ ಆಗಲು ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದಿದ್ದಾರೆ. ನಾಳೆ ಬಂದ್ ಮಾಡಿದ್ರೆ ಹೊಸ ವರ್ಷಾಚರಣೆಗೆ ತೊಂದರೆ ಆಗುತ್ತದೆ ಎಂದು ಹೇಳಿದರು. ನಾವು ಸಿಎಂ ಮಾತಿಗೆ ಗೌರವ ನೀಡಿದ್ದೇವೆ. ಹೀಗಾಗಿ ನಾಳೆ ನಡೆಯಬೇಕಿದ್ದ ಕರ್ನಾಟಕ ಬಂದ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ. ಈ ಬಗ್ಗೆ ಸಭೆ ನಡೆಸಿ ಕರ್ನಾಟಕ ಬಂದ್ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
Kannada organisations on Thursday, December 30, withdrew the Karnataka bandh called by them on December 31, demanding a complete ban on the activities of the Maharashtra Ekikaran Samithi (MES) which has been campaigning for long to merge Marathi speaking regions in Belagavi with Maharashtra. Leaders of several Kannada outfits under the leadership of Vatal Nagaraj, the leader of the Kannada Okkuta, met Chief Minister Basavaraj Bommai on the evening of December 30, ahead of withdrawing the bandh.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm