ಬ್ರೇಕಿಂಗ್ ನ್ಯೂಸ್
30-12-21 11:08 pm HK Desk news ಕರ್ನಾಟಕ
ಬೆಂಗಳೂರು, ಡಿ.30 : ಕಳೆದ ಮೂರು ವರ್ಷಗಳಲ್ಲಿ ರಾಜ್ಯದ 11 ಸಂಸದರು ಪ್ರಧಾನಿ ಮೋದಿ ಕನಸಿನ ‘ಸಂಸದರ ಆದರ್ಶ ಗ್ರಾಮ’ ಯೋಜನೆಗೆ ಎಳ್ಳುನೀರು ಬಿಟ್ಟಿದ್ದಾರೆ. 2019 ರಿಂದ ಈ ಯೋಜನೆಯಡಿ ಸಂಸದರು ತಮ್ಮ ಗ್ರಾಮಗಳನ್ನು ಆಯ್ಕೆ ಮಾಡಿಲ್ಲ.
ಪ್ರಧಾನಿ ನರೇಂದ್ರ ಮೋದಿ 2014ರ ಅ.11ರಂದು ಈ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ತಂದಿದ್ದರು. ಗ್ರಾಮಗಳ ಸಮಗ್ರ ಅಭಿವೃದ್ಧಿಯ ಜತೆಗೆ ಸಂಸದರ ನಾಯಕತ್ವ ಮತ್ತು ಸಾಮರ್ಥ್ಯ ತೋರುವುದು ಯೋಜನೆಯ ಉದ್ದೇಶವಾಗಿತ್ತು. ತುಮಕೂರು ಸಂಸದ ಜಿ.ಎಸ್. ಬಸವರಾಜು ಮಾತ್ರ 2019–20 ಮತ್ತು 2020–21ರಲ್ಲಿ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ ಸಂಸದರು ಒಂದು ವರ್ಷ ಆಯ್ಕೆ ಮಾಡಿದ್ದರೆ ಆನಂತರ ಯೋಜನೆಯಿಂದ ದೂರ ಉಳಿದಿದ್ದಾರೆ.
ಚಿತ್ರದುರ್ಗ, ಧಾರವಾಡ, ಉತ್ತರ ಕನ್ನಡ, ಹಾಸನ, ಚಾಮರಾಜನಗರ, ದಕ್ಷಿಣ ಕನ್ನಡ, ಬೀದರ್, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಹಾವೇರಿ, ಶಿವಮೊಗ್ಗ ಕ್ಷೇತ್ರದ ಸಂಸದರು ಕಳೆದ ಮೂರು ವರ್ಷಗಳಿಂದ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳ ಆಯ್ಕೆಯನ್ನೇ ಮಾಡಿಲ್ಲ.
ಹಾಸನ ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರೇ ಇದ್ದಾರೆ. ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ, ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕ್ಷೇತ್ರಗಳಲ್ಲಿಯೇ ಪ್ರಧಾನಿ ಮೋದಿ ಅವರ ಕನಸಿನ ಯೋಜನೆಗೆ ಎಳ್ಳುನೀರು ಬಿಡಲಾಗಿದೆ.
2019–20ನೇ ಸಾಲಿನಲ್ಲಿ ಬೆಳಗಾವಿ, ಬೆಂಗಳೂರು ಉತ್ತರ, ಚಿಕ್ಕೋಡಿ, ಕೊಪ್ಪಳ, ಕಲಬುರಗಿ, ತುಮಕೂರು, ದಾವಣಗೆರೆ, ಬಳ್ಳಾರಿ ಸಂಸದರು ಮಾತ್ರ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 20 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. 2020–21ನೇ ಸಾಲಿನಲ್ಲಿ ಮಂಡ್ಯ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ರಾಯಚೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರು ಯೋಜನೆಯನ್ನು ಕೈಚೆಲ್ಲಿದ್ದಾರೆ.
2021–22ನೇ ಸಾಲಿನಲ್ಲಿ ಮಂಡ್ಯ, ಬೆಳಗಾವಿ, ವಿಜಯಪುರ, ಉಡುಪಿ–ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. ಈ ಮೂರು ವರ್ಷಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಒಟ್ಟು 25 ಗ್ರಾಮಗಳನ್ನು ಮಾತ್ರ ಯೋಜನೆಯಡಿ ಆಯ್ಕೆ ಮಾಡಿದ್ದಾರೆ.
MPs in Karnataka neglect sansad adarsh gram yojana even after selection of villages.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am