ಬ್ರೇಕಿಂಗ್ ನ್ಯೂಸ್
30-12-21 11:08 pm HK Desk news ಕರ್ನಾಟಕ
ಬೆಂಗಳೂರು, ಡಿ.30 : ಕಳೆದ ಮೂರು ವರ್ಷಗಳಲ್ಲಿ ರಾಜ್ಯದ 11 ಸಂಸದರು ಪ್ರಧಾನಿ ಮೋದಿ ಕನಸಿನ ‘ಸಂಸದರ ಆದರ್ಶ ಗ್ರಾಮ’ ಯೋಜನೆಗೆ ಎಳ್ಳುನೀರು ಬಿಟ್ಟಿದ್ದಾರೆ. 2019 ರಿಂದ ಈ ಯೋಜನೆಯಡಿ ಸಂಸದರು ತಮ್ಮ ಗ್ರಾಮಗಳನ್ನು ಆಯ್ಕೆ ಮಾಡಿಲ್ಲ.
ಪ್ರಧಾನಿ ನರೇಂದ್ರ ಮೋದಿ 2014ರ ಅ.11ರಂದು ಈ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ತಂದಿದ್ದರು. ಗ್ರಾಮಗಳ ಸಮಗ್ರ ಅಭಿವೃದ್ಧಿಯ ಜತೆಗೆ ಸಂಸದರ ನಾಯಕತ್ವ ಮತ್ತು ಸಾಮರ್ಥ್ಯ ತೋರುವುದು ಯೋಜನೆಯ ಉದ್ದೇಶವಾಗಿತ್ತು. ತುಮಕೂರು ಸಂಸದ ಜಿ.ಎಸ್. ಬಸವರಾಜು ಮಾತ್ರ 2019–20 ಮತ್ತು 2020–21ರಲ್ಲಿ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ ಸಂಸದರು ಒಂದು ವರ್ಷ ಆಯ್ಕೆ ಮಾಡಿದ್ದರೆ ಆನಂತರ ಯೋಜನೆಯಿಂದ ದೂರ ಉಳಿದಿದ್ದಾರೆ.
ಚಿತ್ರದುರ್ಗ, ಧಾರವಾಡ, ಉತ್ತರ ಕನ್ನಡ, ಹಾಸನ, ಚಾಮರಾಜನಗರ, ದಕ್ಷಿಣ ಕನ್ನಡ, ಬೀದರ್, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಹಾವೇರಿ, ಶಿವಮೊಗ್ಗ ಕ್ಷೇತ್ರದ ಸಂಸದರು ಕಳೆದ ಮೂರು ವರ್ಷಗಳಿಂದ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳ ಆಯ್ಕೆಯನ್ನೇ ಮಾಡಿಲ್ಲ.
ಹಾಸನ ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರೇ ಇದ್ದಾರೆ. ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ, ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕ್ಷೇತ್ರಗಳಲ್ಲಿಯೇ ಪ್ರಧಾನಿ ಮೋದಿ ಅವರ ಕನಸಿನ ಯೋಜನೆಗೆ ಎಳ್ಳುನೀರು ಬಿಡಲಾಗಿದೆ.
2019–20ನೇ ಸಾಲಿನಲ್ಲಿ ಬೆಳಗಾವಿ, ಬೆಂಗಳೂರು ಉತ್ತರ, ಚಿಕ್ಕೋಡಿ, ಕೊಪ್ಪಳ, ಕಲಬುರಗಿ, ತುಮಕೂರು, ದಾವಣಗೆರೆ, ಬಳ್ಳಾರಿ ಸಂಸದರು ಮಾತ್ರ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 20 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. 2020–21ನೇ ಸಾಲಿನಲ್ಲಿ ಮಂಡ್ಯ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ರಾಯಚೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರು ಯೋಜನೆಯನ್ನು ಕೈಚೆಲ್ಲಿದ್ದಾರೆ.
2021–22ನೇ ಸಾಲಿನಲ್ಲಿ ಮಂಡ್ಯ, ಬೆಳಗಾವಿ, ವಿಜಯಪುರ, ಉಡುಪಿ–ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. ಈ ಮೂರು ವರ್ಷಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಒಟ್ಟು 25 ಗ್ರಾಮಗಳನ್ನು ಮಾತ್ರ ಯೋಜನೆಯಡಿ ಆಯ್ಕೆ ಮಾಡಿದ್ದಾರೆ.
MPs in Karnataka neglect sansad adarsh gram yojana even after selection of villages.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm